ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.27:
ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆೆ ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರ್ಷದಲ್ಲಿ 10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರುಘಟ್ಟ ಕೆರೆಗೆ ಗೃಹ ತ್ಯಾಾಜ್ಯವಾಗಲೀ, ಕೈಗಾರಿಕಾ ತ್ಯಾಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು, ಅರ್ಕಾವತಿ ನದಿ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ನೈಸರ್ಗಿಕವಾಗಿ ಬೆಳೆದಿರುವ ಹುಲ್ಲುಗಾವಲಿನ ಸಂರಕ್ಷಣೆಯ ಜೊತೆಗೆ ಸಂವರ್ಧನೆಯನ್ನೂ ಮಾಡಬೇಕು, ಸುತ್ತಮುತ್ತಲ ಗ್ರಾಾಮಗಳ ಜನರ ದನಕರು, ಮೇಕೆ ಮೇಯಲು ಮುಕ್ತ ಅವಕಾಶ ಇರಬೇಕು, ಸ್ಥಳೀಯ ಗ್ರಾಾಮ ಪಂಚಾಯ್ತಿಿಗಳ ಮತ್ತು ಸಾರ್ವಜನಿಕರ ಸಹಕಾರ ಪಡೆದು ಈ ಪ್ರದೇಶ ಸಂರಕ್ಷಣೆ ಮಾಡುವಂತೆ ತಿಳಿಸಿದರು.
ಹುಲ್ಲುಗಾವಲು ಪಕ್ಷಿಗಳ ಸಂತಾನೋತ್ಪತ್ತಿಿಗೆ ಮಹತ್ವದ ತಾಣಗಳಾಗಿದ್ದು, ಇಲ್ಲಿ ಜಲ ಮೂಲಗಳೂ ಇರುವ ಹಿನ್ನೆೆಲೆಯಲ್ಲಿ ಪಕ್ಷಿಗಳಿಗೆ ಗೂಡು ಕಟ್ಟಲು ಹೊಳೆ ಮತ್ತಿಿ ಹಾಗೂ ಆಹಾರಕ್ಕಾಾಗಿ ಹಣ್ಣಿಿನ ಗಿಡಗಳು ಸೇರಿದಂತೆ ವಿವಿಧ ಸ್ಥಳೀಯ ಪ್ರಭೇದದ ಮರಗಿಡಗಳನ್ನು ಸುತ್ತಲೂ ಬೆಳೆಸುವಂತೆ ನಿರ್ದೇಶನ ನೀಡಿದರು.
ಸಣ್ಣ ನೀರಾವರಿ ಇಲಾಖೆ, ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಸ್ಥಳೀಯ ಸಂಸ್ಥೆೆಗಳ ಸಹಕಾರದೊಂದಿಗೆ ಹೆಸರುಘಟ್ಟ ಪ್ರದೇಶದ ಸಮಗ್ರ ಸಂರಕ್ಷಣೆ ಹಾಗೂ ಅಭಿವೃದ್ಧಿಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಳ್ಳಲು ಮತ್ತು ಅರಣ್ಯ ಇಲಾಖೆಯಿಂದ ಇದಕ್ಕಾಾಗಿ ಹಣ ಮೀಸಲಿಡಲು ಕಾರ್ಯಯೋಜನೆ ರೂಪಿಸುವಂತೆ ಸ್ಥಳದಲ್ಲಿ ಹಾಜರಿದ್ದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಎಪಿಸಿಸಿಎ್ ಕುಮಾರ್ ಪುಷ್ಕರ್, ಬೆಂಗಳೂರು ಡಿಸಿಎ್ ರವೀಂದ್ರ ಕುಮಾರ್ ಎನ್. ಮತ್ತಿಿತರರು ಹಾಜರಿದ್ದರು.,
ಹೆಸರುಘಟ್ಟ ಹುಲ್ಲಗಾವಲು ಸಂರಕ್ಷಣೆಯಾಗಬೇಕು: ಈಶ್ವರ ಖಂಡ್ರೆ

