ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.19
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾಾರೆ.
ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ಅವರ ನಿರ್ದೇಶನದ ಮೇರೆಗೆ ಕಾರಾಗೃಹ ಸುಧಾರಣಾ ಸಂಕಲ್ಪ’ ಅಭಿಯಾನದಡಿ ಡಿ.17ರ ರಾತ್ರಿ9ರಿಂದ 10.30ರವರೆಗೆ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಜೈಲರ್, ಸಹಾಯಕ ಜೈಲರ್ ಹಾಗೂ ಸಿಬ್ಬಂದಿ ಒಳಗೊಂಡ ತಂಡವು ಕಾರಾಗೃಹದ ಒಳ ಆವರಣದಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳಾದ 4 ಕೀ-ಪ್ಯಾಾಡ್ ಮೊಬೈಲ್, 1 ಚಾರ್ಜರ್, 3 ಯುಎಸ್ಬಿ ಕನೆಕ್ಟರ್ ಕೇಬಲ್, 1 ಇಯರ್ ೆನ್ ಪತ್ತೆೆಯಾಗಿವೆ ಎಂದು ತಿಳಿಸಿದ್ದಾಾರೆ.
ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎ್ಐಆರ್ (ಸಂಖ್ಯೆೆ: 231/2025) ದಾಖಲಿಸಲಾಗಿದೆ.
ಸಿಬ್ಬಂದಿಗೆ ಬಹುಮಾನ: ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯ ಶ್ಲಾಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆೆ ರೂ.10,000 ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ತಿಳಿಸಿದ್ದಾಾರೆ.

