ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.18
ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೇ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಿಗೆ ವಿಧಾನಸಭೆ ಅನುಮೋದನೆ ನೀಡಿತು.
ಮುಖ್ಯಮಂತ್ರಿಿ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿತ್ತೀಯ ಕಾರ್ಯಕಲಾಪದಲ್ಲಿ ಪೂರಕ ಅಂದಾಜು ಪಟ್ಟಿಿಯನ್ನು ಅನುಮೋದನೆಗಾಗಿ ಮಂಡಿಸಿ, ಬಜೆಟ್ನ ಹೊರತುಪಡಿಸಿ ಕೆಲವು ಉದ್ದೇಶಗಳಿಗೆ ಹೆಚ್ಚುವರಿಯಾದಂತಹ ಮೊತ್ತವನ್ನು ಪೂರಕ ಅಂದಾಜಿನಲ್ಲಿ ಮಂಡಿಸಲಾಗಿದ್ದು, ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಅತಿವೃಷ್ಠಿಿ ಹಾಗೂ ಪ್ರವಾಹದಿಂದಾಗಿ ಉಂಟಾದ ರೈತರ ಬೆಳೆಹಾನಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್ 8,500 ರೂ. ಪರಿಹಾರವನ್ನು ನಾವು ನೀಡಿದ್ದೇವೆ. ಈ ಹೆಚ್ಚುವರಿ ವೆಚ್ಚ ಭರಿಸಲು 1015.66 ಕೋಟಿ ರೂ. ಗಳನ್ನು ಪೂರಕ ಅಂದಾಜಿನಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಇತ್ತೀಚೆಗೆ ಗುಡ್ಡ ಮತ್ತು ಮಣ್ಣು ಕುಸಿತ ಆಗುತ್ತಿಿದೆ. ಇದನ್ನು ತಡೆಗಟ್ಟಲು ರಾಜ್ಯ ವಿಪತ್ತು ಉಪಶಮನ ನಿಧಿಗಾಗಿ 372 ಕೋಟಿ ರೂ. ಒದಗಿಸಲಾಗುತ್ತಿಿದೆ. ಕಬ್ಬು ಬೆಳೆಗಾರರ ಹಿತ ಕಾಯಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ಟನ್ಗೆ 50 ರೂ. ಗಳನ್ನು ನೀಡುತ್ತಿಿದ್ದು ಇದಕ್ಕಾಾಗಿ 300 ಕೋಟಿ ರೂ., ಅಮೃತ್ ಯೋಜನೆಗಾಗಿ 140 ಕೋಟಿ ರೂ. ದೇವರಾಜ ಅರಸು ಅಭಿವೃದ್ಧಿಿ ನಿಗಮದಡಿ ಹಿಂದುಳಿದ ವರ್ಗಗಳ ಜನರಿಗೆ ಹಲವು ಯೋಜನೆಗಳಡಿ ಸಹಾಯಧನ ಒದಗಿಸಲು 150 ಕೋಟಿ ರೂ., ಪ.ಜಾತಿ, ಪ.ಪಂಗಡದ ವಸತಿ ಶಾಲೆಗಳಿಗೆ ಹಾಗೂ ವಿವಿಧ ವಸತಿ ಶಾಲೆಗಳ ನಿರ್ವಹಣೆಗಾಗಿ 200 ಕೋಟಿ ರೂ. ಸೇರಿದಂತೆ ಪೂರಕ ಅಂದಾಜು ಪಟ್ಟಿಿಯಲ್ಲಿ ಅನುದಾನಕ್ಕೆೆ ಅವಕಾಶ ಮಾಡಿಕೊಳ್ಳಲಾಗಿದೆ ಎಂದರು.
ಈ ಅನುದಾನವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ, ಸಾಲ, ತೆರಿಗೆ ಸಂಗ್ರಹ ಮುಂತಾದ ಮೂಲಗಳಿಂದ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ. ಈ ಪೂರಕ ಅಂದಾಜು ವೆಚ್ಚದ ಮೊತ್ತವು ಈ ವರ್ಷದ ಆಯವ್ಯಯದ ಶೇ. 1.45 ರಷ್ಟಿಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಆರಗ ಜ್ಞಾನೇಂದ್ರ, ವಿ. ಸುನೀಲ್ ಕುಮಾರ್, ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮುಂತಾದವರು ಪೂರಕ ಅಂದಾಜಿನ ಲೆಕ್ಕಪತ್ರದ ಮೇಲೆ ಮಾತನಾಡಿದರು. ಬಳಿಕ 2025-26 ನೇ ಸಾಲಿನ ಪೂರಕ ಅಂದಾಜುಗಳ ಕಂತಿನ ಬೇಡಿಕೆಗಳ ಪಟ್ಟಿಿಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

