ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.26:
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್ಪೋೋರ್ಸ್ ಸಮಿತಿಗಳಿಗೆ ಆದೇಶ ಮಾಡಿದ್ದಾಾರೆ. ಖರೀದಿ ಏಜನ್ಸಿಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದುಘಿ, ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆೆ ಎಚ್ಚರಿಕೆ ವಹಿಸಬೇಕು ಹಾಗೂ ಅವರಿಂದ ಖರೀದಿ ಮಾಡಬಾರದು ಎಂದು ಸೂಚಿಸಿದ್ದಾಾರೆ.
ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು, ಕಲಬುರಗಿ, ಬೀದರ್, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಹಾಗೂ ಬಾಗಲಕೋಟೆ, ಬಳ್ಳಾಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ದ್ವಿಿದಳ ಧಾನ್ಯಗಳ ಅಭಿವೃದ್ಧಿಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಖರೀದಿ ಏಜನ್ಸಿಿಗಳನ್ನಾಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾಾರೆ.
ನೋಂದಣಿ ಕಾಲಾವಧಿ 80 ದಿನ ಹಾಗೂ ಖರೀದಿ ಅವಧಿ 90ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಿಯೆ ಏಕಕಾಲಕ್ಕೆೆ ಆರಂಭಿಸಬೇಕು. ಖರೀದಿ ಸಂಸ್ಥೆೆಗಳು ರೈತರಿಗೆ ಅನುಕೂಲವಾಗುವಂತೆ ನೊಡ್ ಹಾಗೂ ಎನ್ಸಿಿಸಿಎ್ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮು ಹೊಂದಿರುವ ಸಂಸ್ಥೆೆಗಳ ಮೂಲಕ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರ ತೆರೆಯಬೇಕು ಎಂದು ಸೂಚನೆ ನೀಡಿದ್ದಾರೆ.