ಸುದ್ದಿಮೂಲ ವಾರ್ತೆ ಕಲಬುರಗಿ, ಸೆ.30:
ನಿರಂತರ ಮಳೆ ಹಾಗೂ ಭೀಮಾ ನದಿ ಪ್ರವಾಹದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಾಣ ಕರ್ನಾಟಕ ಪ್ರದೇಶದಲ್ಲಿ ಉಂಟಾದ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಪ್ರವಾಹದ ಪರಿಸ್ಥಿಿತಿ ಅವಲೋಕಿಸಿದರು.
ಮಹಾರಾಷ್ಟ್ರದ ಉಜನಿ, ವೀರ ಜಲಾಶಯದಿಂದ ಹೆಚ್ಚಿಿನ ಪ್ರಮಾಣದಲ್ಲಿ ನೀರು ಹರಿಸಿದ ಪರಿಣಾಮ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಿಯಿಂದ ಹಾಳಾದ ಬೆಳೆ ಹಾನಿ ಸಿಎಂ ಸಿದ್ದರಾಮಯ್ಯ ಅವರು ಹೆಲಿಕ್ಯಾಾಪ್ಟರ್ ಮೂಲಕ ಎರಡು ಹಂತಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಆಗಿರುವ ಹಾನಿಯನ್ನು ಅರಿತುಕೊಂಡರು.
ಬೆಂಗಳೂರಿನಿಂದ ಮಂಗಳವಾರ ಬೆಳಗ್ಗೆೆ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಾಣಕ್ಕೆೆ ಆಗಮಿಸಿದ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆೆ ವಿಮಾನ ನಿಲ್ದಾಾಣದಲ್ಲೇ ಪ್ರಾಾಥಮಿಕ ಸಭೆ ನಡೆಸಿ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದರು.
ಬಳಿಕ ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾನಿಗೀಡಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದರೆ, ಎರಡನೇ ಹಂತದಲ್ಲಿ ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹದಿಂದ ಉಂಟಾದ ಮಾಹಿತಿ ಅರಿತರು.
ಮೊದಲ ಹಂತದ ಸಮೀಕ್ಷೆ ವೇಳೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಜಿಲ್ಲೆಯ ಪ್ರದೇಶದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ವಿವರಿಸಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಸಾಥ್ ನೀಡಿದರು. ಎರಡನೇ ಹಂತದ ಬೀದರ್ ಜಿಲ್ಲೆಯ ಸಮೀಕ್ಷೆ ವೇಳೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ಹಾಗೂ ಸಚಿವ ರಹೀಂ ಖಾನ್ ಸಾಥ್ ನೀಡಿದರು.
ಸಿಎಂ ಸಿದ್ದರಾಮಯ್ಯರಿಂದ ಕಲ್ಬುರ್ಗಿ, ಬೀದರ್, ಯಾದಗಿರಿ ಜಿಲ್ಲೆೆಯಲ್ಲಿ ವೈಮಾನಿಕ ಸಮೀಕ್ಷೆ ಅತಿವೃಷ್ಟಿಿ, ಪ್ರವಾಹದಿಂದ ಉಂಟಾದ ಹಾನಿಯ ಕುರಿತು ಸಿಎಂ ಅವಲೋಕನ

