ಸುದ್ದಿಮೂಲ ವಾರ್ತೆ ಬೆಂಗಳೂರು, ಅ.04:
ಕಾಂಗ್ರೆೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮನೆಯಲ್ಲಿಯೇ ವಿಶ್ರಾಾಂತಿ ಪಡೆಯುತ್ತಿಿದ್ದು, ಇಂದು ಮಠಾಧೀಶರು, ಸಚಿವರು, ಕಾಂಗ್ರೆೆಸ್ ಪಕ್ಷದ ಮುಖಂಡರು ಅವರನ್ನು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಲಿಂಗಾಯತ ಮಠಾಧೀಶರು ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಶೀಘ್ರ ಚೇತರಿಕೆಗೆ ಶುಭಕೋರಿದರು. ಇದಕ್ಕೂ ಮುನ್ನ ಅರಣ್ಯ ಸಚಿವ ಈಶ್ವರ ಖಂಡ್ರೆೆ ಖರ್ಗೆಯವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ರಾತ್ರಿಿ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಳಿಕ ಮಾತನಾಡಿದ ಅವರು, ಈಗ ಅವರ ಆರೋಗ್ಯ ಸುಧಾರಿಸುತ್ತಿಿದೆ. ನಮ್ಮ ಅಧ್ಯಕ್ಷರು ಶ್ರಮಜೀವಿ. ದಿನದ 24 ತಾಸು ಕೂಡ ಪಕ್ಷಕ್ಕಾಾಗಿ ದುಡಿಯುತ್ತಾಾರೆ. ಎಲ್ಲೇ ಅವರ ಉಪಸ್ಥಿಿತಿ ಬಯಸಿದರೂ ಅವರು ಪಕ್ಷದ ಕಾರ್ಯಕ್ರಮಗಳಿಗೆ ತೆರಳುತ್ತಿಿದ್ದರು. ಅದು ಈಶಾನ್ಯ ರಾಜ್ಯಗಳಾಗಲಿ, ಯಾವುದೇ ಮೂಲೆ ಇದ್ದರೂ ಅವರು ತೆರಳುತ್ತಿಿದ್ದರು ಎಂದರು.
ಅವರು ಮತ್ತೆೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದು, ಆರೋಗ್ಯ ಗಮನಿಸಿಕೊಂಡು ಸಂಪೂರ್ಣ ವಿಶ್ರಾಾಂತಿ ತೆಗೆದುಕೊಳ್ಳುವಂತೆ ನಾವು ಮನವಿ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿತ್ಯ ಖರ್ಗೆ ಅವರ ಸಂಪರ್ಕದಲ್ಲಿ ಇದ್ದಾರೆ. ಅವರ ಆರೋಗ್ಯ ವಿಚಾರಿಸುತ್ತಿಿದ್ದಾರೆ ಎಂದು ತಿಳಿಸಿದರು.

