ಸುದ್ದಿಮೂಲ ವಾರ್ತೆ ಬೆಂಗಳೂರು, ಅ.19:
ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿಿದ್ದಾರೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆೆಗಳ ಸಮಸ್ಯೆೆಗಳನ್ನು ನಾವು ತೋರಿಸುತ್ತೇವೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾಾನವನದಲ್ಲಿ ಭಾನುವಾರ ಹಮ್ಮಿಿಕೊಂಡಿದ್ದ ಬೆಂಗಳೂರು ನಡಿಗೆ ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿಿದ್ದಾರೆ. ನಾವು ಮುಕ್ತವಾಗಿದ್ದೇವೆ ಎಂದು ಹೇಳಿದರು.
ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿಿದ್ದಾರೆ. ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿಿರುವವರ ವಿರುದ್ಧ ಪರೋಕ್ಷ ವಾಗ್ದಾಾಳಿ ನಡೆಸಿದರು.
ನಗರದಾದ್ಯಂತ ಎಲ್ಲೆಲ್ಲಿ ರಸ್ತೆೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ೆಟೊ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ ಗಮನಕ್ಕೆೆ ತರುವ ವ್ಯವಸ್ಥೆೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆೆ ಹೋಗಿ ಟೀಕೆ ಮಾಡುತ್ತಿಿದ್ದಾರೆ. ಅಂತಹವರ ಟೀಕೆ ಬಗ್ಗೆೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿಿದ್ದೇವೆ ಎಂದರು.
ಜಿಬಿಎ ಮಾಡುವಾಗ ವಿರೋಧ ಪಕ್ಷದವರೂ ಸಹಕಾರ ನೀಡಿದರು. ಈ ಮೊದಲು 198 ವಾರ್ಡ್ ಗಳಿದ್ದವು ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳಾಗಿವೆ. ಇಷ್ಟು ಬೇಗ ಪಾಲಿಕೆ ವಿಭಜನೆಯಿಂದ ಹಿಡಿದು ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವೇ ಎಂದು ದೇಶದಾದ್ಯಂತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಎ ಖಾತಾ ಸೌಲಭ್ಯ ಬಳಸಿಕೊಳ್ಳಿಿ
ಜನರ ಬಳಿಗೆ ಸರ್ಕಾರ ಹೋಗಬೇಕು ಎಂದು ಐದು ಪಾಲಿಕೆಗಳನ್ನು ಮಾಡಲಾಗಿದೆ. ಬಿ ಖಾತಾದಿಂದ ಎ ಖಾತೆಗೆ ಬದಲಾವಣೆ ಮಾಡಿಕೊಳ್ಳಲು ಸರ್ಕಾರ ಅತ್ಯುತ್ತಮ ಅವಕಾಶ ನೀಡಿದೆ. ಸಿಎ ನಿವೇಶನಗಳ ಬಗ್ಗೆೆಯೂ ಪ್ರತ್ಯೇಕ ನೀತಿ ತರಲಾಗುತ್ತಿಿದೆ. ಗೊಂದಲ ಉಂಟಾಗುವುದು ಬೇಡವೆಂದು ನಗರ ಯೋಜನೆ ಕೆಲಸವನ್ನು ಬಿಡಿಎಯಿಂದ ಜಿಬಿಎಗೆ ನೀಡಲಾಗಿದೆ. ದೊಡ್ಡ ಯೋಜನೆಗಳನ್ನು ಸರ್ಕಾರ ಮಾಡಿದರೆ. ಚಿಕ್ಕ ಕೆಲಸಗಳನ್ನು ಪಾಲಿಕೆಗಳು ಮಾಡುತ್ತವೆ ಎಂದರು.
1.04 ಲಕ್ಷ ಕೋಟಿ ಮೊತ್ತದ ಯೋಜನೆಗಳು
ಬೆಂಗಳೂರಿನ ಸಮಗ್ರ ಅಭಿವೃದ್ಧಿಿಗೆ ಟನಲ್ ರಸ್ತೆೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್, ಬರ್ ರಸ್ತೆೆ, ನಗರ ಸೌಂದರ್ಯ ಹೆಚ್ಚಿಿಸಲು ದೀಪಾಲಂಕಾರ, ಬೀದಿ ದೀಪಗಳಿಗೆ ಎಲ್ ಇಡಿ ಬಲ್ಬ್ ಅಳವಡಿಕೆ ಸೇರಿದಂತೆ, ಮುಂದಿನ ನಾಲ್ಕೈದು ವರ್ಷಗಳಲ್ಲಿ 1.04 ಲಕ್ಷ ಕೋಟಿಯಷ್ಟು ಅಭಿವೃದ್ಧಿಿ ಯೋಜನೆ ರೂಪಿಸಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.