ಸುದ್ದಿಮೂಲ ವಾರ್ತೆ ಧಾರವಾಡ, ನ.06:
ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಘ ಸಂಸ್ಥೆೆಗಳ ರ್ಯಾಾಲಿ, ಸಭೆಗಳನ್ನು ನಡಸುವುದಕ್ಕೆೆ ಅನುಮತಿ ಕಡ್ಡಾಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋೋಲೆಗೆ ತಡೆಯಾಜ್ಞೆ ನೀಡಿದ್ದ ಆದೇಶವನ್ನು ರದ್ದುಗೊಳಿಸಲು ಧಾರವಾಡ ಹೈಕೋರ್ಟ್ನ ದ್ವಿಿಸದಸ್ಯ ಪೀಠ ನಿರಾಕರಿಸಿದೆ.
ಅಲ್ಲದೆ, ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂಬಂಧ ಏಕ ಸದಸ್ಯ ಪೀಠಕ್ಕೆೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೂಚನೆ ನೀಡಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ರದ್ದುಗೊಳಿಸಿ ಆದೇಶಿಸಿದೆ.
ಸರ್ಕಾರದ ಸುತ್ತೋೋಲೆಗೆ ತಡೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ಕೋರಿ ದ್ವಿಿಸದಸ್ಯ ಪೀಠಕ್ಕೆೆ ಸರ್ಕಾರ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಾಯಮೂರ್ತಿ ಎಸ್. ಜಿ. ಪಂಡಿತ್ ಮತ್ತು ಗೀತಾ ಕೆ. ಬಿ ಅವರಿದ್ದ ದ್ವಿಿಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಸರ್ಕಾರ ಅರ್ಜಿಯನ್ನು ಹೈಕೋರ್ಟ್ ದ್ವಿಿಸದಸ್ಯ ಪೀಠ ವಜಾ ಮಾಡಿದೆ. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಾಯಕ್ಕೆೆ ತಡೆಯಾಜ್ಞೆ ನೀಡಿದ್ದ ಆದೇಶ ತೆರವುಗೊಳಿಸುವ ಬಗ್ಗೆೆ ಮತ್ತೆೆ ಏಕಸದಸ್ಯ ಪೀಠಕ್ಕೆೆ ಅರ್ಜಿ ಸಲ್ಲಿಸಿ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಸಾರ್ವಜನಿಕ ಅರ್ಜಿದಾರರ ಪರ ವಕೀಲ ಮಲ್ಲಿಕಾರ್ಜುನ ಹಿರೇಮಠ ತಿಳಿಸಿದ್ದಾರೆ.
ಸರ್ಕಾರದ ಜಾಗ ನಾವು ರಕ್ಷಣೆ ಮಾಡುತ್ತೇವೆ ಎನ್ನುವ ಕಾರಣಕ್ಕೆೆ ಅನುಮತಿ ಕಡ್ಡಾಾಯ ಮಾಡುವುದನ್ನು ಒಪ್ಪಿಿಕೊಳ್ಳಲ್ಲ ಎಂದು ಕೋರ್ಟ್ ತಿಳಿಸಿದೆ. ಇದರಿಂದ ಸರ್ಕಾರ ಮತ್ತೊೊಮ್ಮೆೆ ಏಕಸದಸ್ಯ ಪೀಠ ಹಾಗೂ ಸುಪ್ರೀೀಂಗೆ ಅರ್ಜಿ ಹಾಕಬಹುದು. ನ.17 ರಂದು ಏಕಸದಸ್ಯ ಪೀಠ ವಿಚಾರಣೆ ನಡೆಸಲಿದೆ ಎಂದು ವಕೀಲ ಹಿರೇಮಠ ಮಾಹಿತಿ ನೀಡಿದ್ದಾರೆ.
ಮೇಲ್ಮವಿಗೆ ಸಂಬಂಧಿಸಿದಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿ ಸಲ್ಲಿಸಿದವರ ಪೈಕಿ ಇಬ್ಬರು ಸಂಸ್ಥೆೆಗಳನ್ನು ಹೊಂದಿದ್ದಾರೆ. ಅವರು ಸಾರ್ವಜನಿಕ ಸ್ಥಳದಲ್ಲಿ ಕಾರ್ಯಕ್ರಮ ಮಾಡುತ್ತಾಾರೆ. ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೇ ಕಾರ್ಯಕ್ರಮ ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಿಯಿಂದ ಸರ್ಕಾರ ಆದೇಶ ಮಾಡಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಪೀಠಕ್ಕೆೆ ಮನವಿ ಮಾಡಿದ್ದರು.
ಈ ವೇಳೆ ಪೀಠ, 10 ಜನರು ಸೇರಿದರೆ ಅನುಮತಿ ಬೇಕಾ. ಅದರ ಅವಶ್ಯಕತೆ ಇದೆಯಾ. ಯಾರೋ ಕೆಲವರು ಪಾರ್ಕ್ಗಳಲ್ಲಿ ಜೊತೆಯಾಗಿ ಹೋಗುತ್ತಾಾರೆ. ಅದಕ್ಕೂ ಕೂಡ ಅನುಮತಿ ಬೇಕಾ. ಎಂದು ಸರ್ಕಾರದ ಪರ ವಕೀಲರಿಗೆ ಪ್ರಶ್ನಿಿಸಿತ್ತು.
ಇದಕ್ಕೆೆ ವಕೀಲರು, ಸರ್ಕಾರಿ ರಸ್ತೆೆ ಇರುವುದು ಸಾರ್ವಜನಿಕರ ಓಡಾಟಕ್ಕೆೆ. ಹೀಗಾಗಿ ಅದು ಸಾರ್ವಜನಿಕರಿಗೆ ಉಪಯೋಗವಾಗಬೇಕು. ಖಾಸಗಿಯವರು ಕಾರ್ಯಕ್ರಮ ಮಾಡಲು ಬೇರೆ ಕಡೆ ಸ್ಥಳ ಬಾಡಿಗೆ ಪಡೆದು ಕಾರ್ಯಕ್ರಮ ಮಾಡಬಹುದು. ಸಾರ್ವಜನಿಕ ಆಸ್ತಿಿಗಳನ್ನು ಕಾಪಾಡಿಕೊಳ್ಳುವ ದೃಷ್ಟಿಿಯಿಂದ ಈ ಆದೇಶ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಿಯಿಂದ ಇದನ್ನು ಮಾಡಲಾಗಿದೆ. ಇದರಲ್ಲಿ ಕಾಯ್ದೆೆ 19ಎ ಉಲ್ಲಂಘನೆಯಾಗಲ್ಲ ಎಂದು ಪೀಠಕ್ಕೆೆ ಹೇಳಿದರು.
ಇನ್ನು ಸರ್ಕಾರಿ ವಕೀಲರ ವಾದಕ್ಕೆೆ ಪ್ರತಿವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಸರ್ಕಾರದ ಆದೇಶ ಸರಿಯಲ್ಲ. ಇದು ಸಂವಿಧಾನ ಬಾಹಿರವಾಗಲಿದೆ. ಸರ್ಕಾರಿ ಜಾಗ ಇರುವುದೇ ಸಾರ್ವಜನಿಕರ ಬಳಕೆಗಾಗಿಯಾಗಿದೆ. ಇದು ಸಾರ್ವಜನಿಕರ ಹಕ್ಕಿಿನ ಉಲ್ಲಂಘನೆಯಾಗುತ್ತದೆ. ಪಾರ್ಕುಗಳು ಸ್ಥಳೀಯ ಸಂಸ್ಥೆೆಗಳ ಒಡೆತನದಲ್ಲಿ ಇರುತ್ತವೆ. ಅವುಗಳಿಗೆ ನಿರ್ಬಂಧ ಹೇರುವುದು ಸಾರ್ವಜನಿಕರ ಹಕ್ಕಿಿನ ಉಲ್ಲಂಘನೆಯಾಗುತ್ತದೆ ಎಂದು ವಾದ ಮಂಡಿಸಿದರು.

