ಸುದ್ದಿಮೂಲ ವಾರ್ತೆ ನವದೆಹಲಿ, ನ.06:
ನವೆಂಬರ್ ಕ್ರಾಾಂತಿನೂ ಇಲ್ಲ, ಡಿಸೆಂಬರ್ ಕ್ರಾಾಂತಿನೂ ಇಲ್ಲ. ಕ್ರಾಾಂತಿ ಆಗುವುದು ಏನಿದ್ದರೂ 2028 ಕಾಂಗ್ರೆೆಸ್ ಮತ್ತೆೆ ಅಧಿಕಾರಕ್ಕೆೆ ಬರುವ ಮೂಲಕ ನಡೆಯುತ್ತದೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ಹೇಳಿದರು.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನವೆಂಬರ್ ಕ್ರಾಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆೆ ಚರ್ಚೆಯಾಗುತ್ತಿಿದೆ ಎಂದು ಕೇಳಿದಾಗ, ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಾಂತಿ ಆಗುವುದಿಲ್ಲ ಎಂದು ತಿಳಿಸಿದರು.
ದೆಹಲಿ ಭೇಟಿಯಲ್ಲಿ ಹೈಕಮಾಂಡ್ನ ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ನಿನ್ನೆೆ ರಾತ್ರಿಿಯೂ ಸಭೆ ಮಾಡಿದ್ದೇವೆ, ಇಂದು ಸಭೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು. ನಾಯಕತ್ವ ಬದಲಾವಣೆ ಬಗ್ಗೆೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳೀದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು.
ಸಿಎಂ ಐದು ವರ್ಷ ಇರಬೇಕು ಎಂದರೆ ಐದು ವರ್ಷ ಇರುತ್ತಾಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷ ಇರುತ್ತಾಾರೆ. 15 ವರ್ಷ ಇರಬೇಕು ಎಂದರೆ 15 ವರ್ಷ ಇರುತ್ತಾಾರೆ. ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿಿರಬೇಕು. ನಾನು ಪಕ್ಷದ ಶಿಸ್ತಿಿನ ಸಿಪಾಯಿ. ಪಕ್ಷದ ರೇಖೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಬಗ್ಗೆೆ ದೆಹಲಿ ನಾಯಕರು ಯಾವಾಗ, ಯಾವ ರೀತಿ ಮಾಡಬೇಕೋ ಮಾಡುತ್ತಾಾರೆ ಎಂದು ಡಿಸಿಎಂ ಹೇಳಿದರು.
ಕಾವೇರಿ (ಮೇಕೆದಾಟು ಯೋಜನೆ) ವಿಚಾರವಾಗಿ ಪ್ರತ್ಯೇಕ ಪೀಠ ರಚಿಸುವುದಾಗಿ ಹೇಳುತ್ತಿಿದ್ದಾರೆ. ಇದಕ್ಕೆೆ ದಿನಾಂಕ ನಿಗದಿ ಮಾಡಲಿದ್ದು, ರಾಜ್ಯಕ್ಕೆೆ ನ್ಯಾಾಯ ಸಿಗಲಿ ಎಂದು ಪ್ರಾಾರ್ಥನೆ ಮಾಡೋಣ ಎಂದರು.

