ಸುದ್ದಿಮೂಲ ವಾರ್ತೆ ಬೆಂಗಳೂರು, ನ.09:
ಲೋಕಾಯುಕ್ತ ಸಂಸ್ಥೆೆಯಲ್ಲಿ ಕೆಲಸ ನಿರ್ವಹಿಸುವ ಲೋಕಾಯುಕ್ತರು ಹಾಗೂ ಉಪ ಲೋಕಾಯುಕ್ತರು ಪ್ರತಿ ವರ್ಷ ತಮ್ಮ ಆಸ್ತಿಿ ವಿವರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಕಾಯ್ದೆೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ವಕ್ತಾಾರ ರಮೇಶ ಬಾಬು ಅವರು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಲೋಕಾಯುಕ್ತರಿಗೆ ರಾಜ್ಯ ಸರ್ಕಾರದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ನಿಗದಿತ ಅವಧಿಯಲ್ಲಿ ಆಸ್ತಿಿ ವಿವರ ಸಲ್ಲಿಸಬೇಕು. ಸಲ್ಲಿಸದಿದ್ದರೆ ಸಲ್ಲಿಸದವರ ಹೆಸರನ್ನು ಲೋಕಾಯುಕ್ತರು ಬಹಿರಂಗಗೊಳಿಸುತ್ತಾಾರೆ. ಸಾರ್ವಜನಿಕ ಹಿತದೃಷ್ಟಿಿಯಿಂದ ಇದು ಅವಶ್ಯಕವಾಗಿದೆ. ಅದೇ ರೀತಿ ಲೋಕಾಯುಕ್ತ ಸಂಸ್ಥೆೆಯಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು ಹಾಗೂ ಉಪ ಲೋಕಾಯುಕ್ತರು ತಮ್ಮ ಆಸ್ತಿಿ ಪಟ್ಟಿಿಯನ್ನು ಪ್ರಕಟಿಸುವುದು ಸಾರ್ವಜನಿಕ ಹಿತದೃಷ್ಟಿಿಯಿಂದ ಅವಶ್ಯಕವಾಗಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಕ್ಕೆೆ 2021ರ ಜುಲೈ 12ರಂದು ಒಂದು ಮನವಿಯನ್ನು ಸಲ್ಲಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆೆಗೆ ತಿದ್ದುಪಡಿ ಮಾಡಿ ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸಾರ್ವಜನಿಕ ಹಿತ ದೃಷ್ಟಿಿಯಿಂದ ತಮ್ಮ ಆಸ್ತಿಿ ಮತ್ತು ದಾಯಿಕ ಪಟ್ಟಿಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕಾಯ್ದೆೆ ತರಬೇಕಾಗಿ ಮನವಿ ಮಾಡಿದ್ದೆನು. ನನ್ನ ಮನವಿಗೆ ಅನುಗುಣವಾಗಿ ಸರ್ಕಾರವು 5-8-2021ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಕಾಯ್ದೆೆ ತಿದ್ದುಪಡಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಿತ್ತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ 27-10-2021ರಲ್ಲಿ ಕರ್ನಾಟಕ ಲೋಕಾಯುಕ್ತದ ನಿಬಂಧಕರಿಗೆ ಪತ್ರ ಬರೆದ ನನ್ನ ಪತ್ರದ ಮೇಲೆ ಕಾಯ್ದೆೆ ತಿದ್ದುಪಡಿಗೆ ಅಭಿಪ್ರಾಾಯ ನೀಡುವಂತೆ ಕೇಳಿರುತ್ತಾಾರೆ. ಆದರೆ ಲೋಕಾಯುಕ್ತ ನಿಬಂಧಕರಿಂದ ಸದರಿ ಪತ್ರಕ್ಕೆೆ ಉತ್ತರವಾಗಲಿ ಅಥವಾ ಮಾಹಿತಿಯಾಗಲಿ ನೀಡಿರುವ ಬಗ್ಗೆೆ ಇದುವರೆಗೆ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಿರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಲೋಕಾಯುಕ್ತ ಸಂಸ್ಥೆೆ ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗಿರುವುದು ಸಾರ್ವಜನಿಕ ಹಿತ ದೃಷ್ಟಿಿಯಿಂದ ಪ್ರಮುಖವಾಗಿರುತ್ತದೆ. ಕರ್ನಾಟಕದಲ್ಲಿ ಉಚ್ಚ ನ್ಯಾಾಯಾಲಯದ ನ್ಯಾಾಯಾಧೀಶರು ಸ್ವಯಂ ಪ್ರೇೇರಿತವಾಗಿ ತಮ್ಮ ಆಸ್ತಿಿ ವಿವರಗಳನ್ನು ಪ್ರಕಟಪಡಿಸುತ್ತಿಿದ್ದಾರೆ. ಅದಕ್ಕೆೆ ಪೂರಕವಾಗಿ ಲೋಕಾಯುಕ್ತ ಕಾಯ್ದೆೆಗೆ ತಿದ್ದುಪಡಿ ತಂದು ಲೋಕಾಯುಕ್ತರು, ಉಪಲೋಕಾಯುಕ್ತರು ತಮ್ಮ ಆಸ್ತಿಿಯ ವಿವರಗಳನ್ನು ಬಹಿರಂಗಗೊಳಿಸುವಂತೆ ತಿದ್ದುಪಡಿ ಮಾಡುವುದು ಅನಿವಾರ್ಯವಾಗಿರುತ್ತದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆೆಯು 2017 -18 ನೇ ಸಾಲಿನಿಂದ 2021-22ನೇ ಸಾಲಿನವರೆಗೆ ವಾರ್ಷಿಕ ವರದಿಗಳನ್ನು ವಿಧಾನಮಂಡಲದಲ್ಲಿ ಮಂಡಿಸಿರುವುದಿಲ್ಲ. ಕರ್ನಾಟಕ ವಿಧಾನ ಪರಿಷತ್ತಿಿನ 153 ನೇ ಅದಿವೇಶನದಲ್ಲಿ ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕ ಪತ್ರಗಳ ಪಟ್ಟಿಿಯಲ್ಲಿ, ಕರ್ನಾಟಕ ಲೋಕಾಯುಕ್ತ ಸಂಸ್ಥೆೆಯ ತನ್ನ 4 ವರ್ಷದ ವಾರ್ಷಿಕ ವರದಿಗಳನ್ನು ಮಂಡಿಸಿಲ್ಲದೆ ಇರುವುದು ತಿಳಿದು ಬರುತ್ತದೆ. ಪ್ರತಿ ಸಂಸ್ಥೆೆಯು ತನ್ನ ವಾರ್ಷಿಕ ವರದಿಗಳನ್ನು ಮತ್ತು ಲೆಕ್ಕ ಪತ್ರಗಳನ್ನು ವಿಧಾನ ಮಂಡಲದಲ್ಲಿ ಮಂಡಿಸಬೇಕಾಗಿದ್ದು, ಕರ್ನಾಟಕ ಲೋಕಾಯುಕ್ತ ಸಂಸ್ಥೆೆಯು ತನ್ನ ವರದಿಗಳನ್ನು ಮಂಡಿಸದಿರುವುದು ವಿಧಾನಪರಿಷತ್ತಿಿನ ವರದಿಯಲ್ಲಿ ಕಂಡುಬರುತ್ತದೆ. ತಾವು ದಯಮಾಡಿ ಕರ್ನಾಟಕ ಲೋಕಾಯುಕ್ತ ಸಂಸ್ಥೆೆಯು ತನ್ನ ವಾರ್ಷಿಕ ವರದಿಯನ್ನು ಅನುಮೋದನೆಗಾಗಿ ನಿಯಮಾನುಸಾರ ವಿಧಾನ ಮಂಡಲದಲ್ಲಿ ಮಂಡಿಸಲು ಕ್ರಮ ಕೈಗೊಳ್ಳಬೇಕಾಗಿ ಕೋರುತ್ತೇನೆ.
ಪಾರದರ್ಶಕ ಆಡಳಿತದ ಕಾರಣಕ್ಕಾಾಗಿ ಲೋಕಾಯುಕ್ತ ಸಂಸ್ಥೆೆಯಲ್ಲಿ ಕಾರ್ಯನಿರ್ವಹಿಸುವ ನ್ಯಾಾಯಮೂರ್ತಿಗಳು ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿಿಯ ವಿವರಗಳನ್ನು ಬಹಿರಂಗಗೊಳಿಸುವುದು ಒಂದು ಆರೋಗ್ಯಕರ ಮತ್ತು ಅವಶ್ಯಕವಾದ ಕ್ರಮವಾಗಿರುತ್ತದೆ. ಈ ಹಿನ್ನೆೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕಾಯ್ದೆೆಗೆ ತಿದ್ದುಪಡಿ ತಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆೆಯಲ್ಲಿ ಇರುವ ಲೋಕಾಯುಕ್ತರು, ಉಪಲೋಕಾಯುಕ್ತರು ಮತ್ತು ನೌಕರರು ಪ್ರತಿ ವಾರ್ಷಿಕ ವರ್ಷದಲ್ಲಿ ತಮ್ಮ ಆಸ್ತಿಿಗಳನ್ನು ಬಹಿರಂಗಗೊಳಿಸಲು ಕಾಯ್ದೆೆಗೆ ತಿದ್ದುಪಡಿ ತರಬೇಕೆಂದು ವಿನಂತಿಸುತ್ತೇನೆ.

