ಸುದ್ದಿಮೂಲ ವಾರ್ತೆ ಬೆಂಗಳೂರು, ನ.12:
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಾಪಿಸಿದ್ದು ನಾನು. ಮೊದಲಿಂದಲೂ ಸನಾತನವಾದಿ ಆರ್ಎಸ್ಎಸ್ಗೆ ನಾನು ವಿರುದ್ಧ. ಜಾತಿ ವ್ಯವಸ್ಥೆೆ ಮತ್ತು ಮೌಢ್ಯಕ್ಕೆೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾಾರ್ಥಿನಿಲಯದ ನೂತನ ಕಟ್ಟಡಕ್ಕೆೆ ಶಂಕುಸ್ಥಾಾಪನೆ ನೆರವೇರಿಸಿ ಮಾತನಾಡಿದ ಅವರು, ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು ಎಂದು ಹೇಳಿದರು.
ಸಮಾಜವನ್ನು ಒಡೆದು ಜಾತಿ ವ್ಯವಸ್ಥೆೆ ರೂಪಿಸಿದ ಸಿದ್ಧಾಾಂತ ಆರ್ಎಸ್ಎಸ್ನದ್ದು. ಈ ಸಿದ್ಧಾಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು ಆರ್ಎಸ್ಎಸ್ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.
ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಿಸಿ ಹಳೆ ಕಟ್ಟಡ ನೆಲಸಮ ಮಾಡಿ ನೂತನ ಕಟ್ಟಡಕ್ಕೆೆ ಶಂಕುಸ್ಥಾಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣ ಆಗಲಿದೆ ಎಂದರು.
ಹಳೆ ಕಟ್ಟಡದಲ್ಲಿದ್ದ ಹಾಸ್ಟೆೆಲ್ ನಲ್ಲಿ ಓದಿದವರು ಒಳ್ಳೊೊಳ್ಳೆೆ ಅಧಿಕಾರಿಗಳಾಗಿದ್ದಾರೆ. ಜಡ್ಜ್ ಗಳೂ ಆಗಿದ್ದಾರೆ. ನಾನು 1983ರಲ್ಲಿ ಶಾಸಕನಾಗಿ 1984ರಲ್ಲಿ ಮಂತ್ರಿಿ ಆದೆ. ನಾನು ಸಾರಿಗೆ ಮಂತ್ರಿಿ ಆಗಿದ್ದಾಗ 1988 ರಲ್ಲೇ ಕನಕದಾಸರ 500ನೇ ಜಯಂತ್ಯುತ್ಸವ ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ಹೊಸ ಕಟ್ಟಡದಲ್ಲೂ ಹಾಸ್ಟೆೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿಿರಲಿಲ್ಲ, ಮುಖ್ಯಮಂತ್ರಿಿಯೂ ಆಗುತ್ತಿಿರಲಿಲ್ಲ. ಬಳಿಕ ಪ್ರೊೊ.ನಂಜುಂಡಸ್ವಾಾಮಿ ಅವರ ಕಾರಣದಿಂದ ರಾಜಕೀಯಕ್ಕೆೆ ಬಂದೆ. ನಾನು ರಾಜಕಾರಣಕ್ಕೆೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.
ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆೆ ಜಾಗ-ಕಟ್ಟಡ ಉಳಿಸಿಕೊಟ್ಟಿಿದ್ದೇನೆ. ಸಂಗೊಳ್ಳಿಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿಿ ಅಭಿವೃದ್ಧಿಿ ಪ್ರಾಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ ಕುರುಬ ಸಮಾಜಕ್ಕೆೆ ಆಸ್ತಿಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು ಎಂದು ನೆನಪಿಸಿಕೊಂಡರು.
ಕಟ್ಟಡ 18 ತಿಂಗಳಲ್ಲಿ ಉದ್ಘಾಾಟನೆ
ನಗರಾಭಿವೃದ್ಧಿಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಮಾತನಾಡಿ, ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಅವರು ಅಣ್ಣ-ತಮ್ಮಂದಿರಂತೆ ಅನ್ಯೋೋನ್ಯವಾಗಿದ್ದಾರೆ. ಸಿದ್ದರಾಮಯ್ಯ ಅವರು ಕೇವಲ ಕುರುಬ ಸಮುದಾಯಕ್ಕಷ್ಟೇ ಅಲ್ಲ, ರಾಜ್ಯದ ಏಳೂವರೆ ಕೋಟಿ ಜನರ ಧ್ವನಿಯಾಗಿ, ಎಲ್ಲಾ ಸಮುದಾಯಗಳ ಪರವಾಗಿ ಜಾತ್ಯತೀತ ಮನೋಭಾವನೆಯಿಂದ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿಿದ್ದಾರೆ ಎಂದರು.
ರಾಜ್ಯದಲ್ಲಿ ಕುರುಬ ಸಮಾಜ ಬಲಿಷ್ಠವಾಗಿದ್ದು, ಕೆಲವರು ಎಲ್ಲೋ ಕುಳಿತು ನಮ್ಮ ನಾಯಕ ಸಿದ್ದರಾಮಯ್ಯ ಅವರ ಬಗ್ಗೆೆ ಏನೇನೋ ಹೇಳಿಕೆಗಳನ್ನು ನೀಡುತ್ತಿಿದ್ದಾರೆ. ಅವರ ಬಗ್ಗೆೆ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಸಮಾಜದ ಕಾಗಿನೆಲೆ ಪೀಠವನ್ನು ಸ್ಥಾಾಪನೆ ಮಾಡುವಲ್ಲಿ ಸಿದ್ದರಾಮಯ್ಯನವರ ಪಾತ್ರ ಪ್ರಮುಖವಾಗಿದೆ. ಅವರು ಪೀಠಕ್ಕೆೆ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚಿಿನ ಅನುದಾನ ನೀಡಿದ್ದು, ಇತರ ಸಮುದಾಯಗಳಿಗೂ ಯಥೇಚ್ಛವಾಗಿ ಅನುದಾನಗಳನ್ನು ನೀಡುವ ಮೂಲಕ ಎಲ್ಲಾ ಸಮುದಾಯದ ನಾಯಕರಾಗಿದ್ದಾರೆ ಎಂದು ಬೈರತಿ ಸುರೇಶ್ ಶ್ಲಾಾಘಿಸಿದರು.
ಇದೇ ವೇಳೆ, ನೂತನ ಕಟ್ಟಡಕ್ಕೆೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವಂತೆ ಸಚಿವ ಬೈರತಿ ಸುರೇಶ್ ಅವರು ರಾಜ್ಯ ಕುರುಬರ ಸಂಘದ ಪದಾಧಿಕಾರಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀ ಈಶ್ವರಾನಂದಪುರಿ ಸ್ವಾಾಮೀಜಿ ಮತ್ತು ತಿಂತಿಣಿ ಮಠದ ಶ್ರೀ ಸಿದ್ದರಾಮೇಶ್ವರ ನಂದಾಪುರಿ ಸ್ವಾಾಮೀಜಿ, ಗ್ಯಾಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ವತೂರ್ರ ಪ್ರಕಾಶ್, ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ, ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿಿತರಿದ್ದರು.
ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾಾರ್ಥಿನಿಲಯದ ನೂತನ ಕಟ್ಟಡಕ್ಕೆೆ ಸಿಎಂ ಶಂಕುಸ್ಥಾಾಪನೆ ಶೋಷಿತ ಸಮುದಾಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಾಪನೆ: ಸಿದ್ದರಾಮಯ್ಯ

