ಸುದ್ದಿಮೂಲ ವಾರ್ತೆ ಬೆಂಗಳೂರು, ನ.27:
ಗ್ರಾಾಮೀಣ ಪ್ರದೇಶದ ವಿದ್ಯಾಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಾಕಾಂಕ್ಷಿ ಶಾಲೆಯ ಅಂಗಳದಲ್ಲಿ ತಾರಾಲಯ ಡಿಜಿಟಲ್ ಮೊಬೈಲ್ ಪ್ಲಾಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗ್ರಾಾಮೀಣ ಭಾಗದ ವಿದ್ಯಾಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ ಹೆಚ್ಚು ವಿದ್ಯಾಾರ್ಥಿಗಳನ್ನು ತಲುಪಿದ್ದು, ಈ ಸಾಧನೆ ಹೆಮ್ಮೆೆಯ ವಿಷಯ, ಎಂದು ತಿಳಿಸಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ಮಾತನಾಡಿ, ನಮ್ಮ ಸರ್ಕಾರವು ವಿಜ್ಞಾನ ಶಿಕ್ಷಣಕ್ಕೆೆ ದೃಢವಾಗಿ ಬದ್ಧವಾಗಿದೆ. ಈ ಯೋಜನೆಗೆ ಹೊಸ ಚೈತನ್ಯ ಮತ್ತು ಸುಧಾರಿತ ತಂತ್ರಜ್ಞಾನದ ಸ್ಪರ್ಶ ನೀಡಲಾಗಿದೆ. ಪ್ರಸ್ತುತ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿರುವ ಈ ಮಹತ್ವದ ಸೇವೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯ ಮಕ್ಕಳು ತಲುಪುವಂತೆ ವಿಸ್ತರಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು, ಎಂದು ಘೋಷಿಸಿದರು.
ಕಾರ್ಯಕ್ರಮದಲ್ಲಿ ಐಟಿ,ಬಿಟಿ ಸಚಿವ ಪ್ರಿಿಯಾಂಕ ಖರ್ಗೆ, ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಸ್ಟೆೆಪ್ಸ್ ವ್ಯವಸ್ಥಾಾಪಕ ನಿರ್ದೇಶಕ ಸದಾಶಿವ ಪ್ರಭು ಉಪಸ್ಥಿಿತರಿದ್ದರು
ಬಾಕ್ಸ್
ಏನಿದು ಯೋಜನೆ
ನಗರಗಳಿಗೆ ಸೀಮಿತವಾಗಿದ್ದ ಪ್ಲಾಾನೆಟೇರಿಯಂ ಅನುಭವದಿಂದ ಗ್ರಾಾಮೀಣ ವಿದ್ಯಾಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಸುಸಜ್ಜಿಿತ ವಾಹನಗಳಲ್ಲಿ 5 ಮೀಟರ್ ಗಾತ್ರದ ಗುಂಬಜ್ , 360-ಡಿಗ್ರಿಿ ಫಿಶ್ ಐ ಲನ್ಸ್ ಪ್ರೊೊಜೆಕ್ಟರ್, ಹವಾ ನಿಯಂತ್ರಣ ವ್ಯವಸ್ಥೆೆ ಮತ್ತು ಅತ್ಯಾಾಧುನಿಕ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುತ್ತದೆ. ಮಕ್ಕಳು ಶಾಲೆಯ ಅಂಗಳದಲ್ಲೇ ಕುಳಿತು ಬ್ರಹ್ಮಾಾಂಡದ ಅದ್ಭುತಗಳನ್ನು ವೀಕ್ಷಿಸುವ ಅಪರೂಪದ ಅವಕಾಶವನ್ನು ಇದು ಕಲ್ಪಿಿಸಲಿದೆ.
ಶಾಲೆಯ ಅಂಗಳದಲ್ಲಿ ತಾರಾಲಯ ಯೋಜನೆಗೆ ಸಿಎಂ ಚಾಲನೆ

