ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.02:
ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿ-ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲುಗಾಡಿಯ ಸಂಚಾರದ ಸಮಯವನ್ನು ಜನವರಿ ಒಂದರಿಂದ ಬದಲಾಯಿಸಲು ಕೇಂದ್ರ ರೈಲ್ವೆೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದರಾದ ಡಾ.ಉಮೇಶ್ ಜಾಧವ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಾಯಿಸುತ್ತಿಿದ್ದು ರೈಲ್ವೆೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 ರಿಂದ ಬೆಳಿಗ್ಗೆೆ 5.15 ರ ಬದಲು ಬೆಳಗ್ಗೆೆ 06:10 ಕ್ಕೆೆ ಹೊರಟು ಬೆಂಗಳೂರಿಗೆ ಮಧ್ಯಾಾಹ್ನ 02:10 ಕ್ಕೆೆ (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೈಯಪ್ಪನಹಳ್ಳಿಿ) ತಲುಪಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಇದೀಗ ಈ ರೈಲು ಕಲಬುರಗಿಗೆ ಮೊದಲಿನಿಂದ 45 ನಿಮಿಷ ಬೇಗ ಅಂದರೆ ರಾತ್ರಿಿ 11.30 ಗಂಟೆಗೆ ಬದಲಾಗಿ ರಾತ್ರಿಿ 10.45 ಕ್ಕೆೆ ತಲುಪಲಿದೆ. ಒಟ್ಟಾಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಮುಂದೆ ಪುಟ್ಟಪರ್ತಿ ಸತ್ಯಸಾಯಿ ದರ್ಶನ ಮಾಡುವ ಭಕ್ತರಿಗೆ ಅನುಕೂಲಕರವಾಗುವಂತೆ ಸತ್ಯಸಾಯಿ ಪ್ರಶಾಂತಿ ನಿಲಯಂ ನಲ್ಲಿ ವಂದೇ ಭಾರತ್ ಗೆ ನಿಲುಗಡೆ ಸೌಲಭ್ಯವನ್ನು ನೀಡಿರುವುದು ಇನ್ನಷ್ಟು ಖುಷಿಯ ಸಂಗತಿ ಎಂದು ಜಾಧವ್ ಹೇಳಿದ್ದಾರೆ.
ಪ್ರಧಾನ ಮಂತ್ರಿಿ ನರೇಂದ್ರ ಮೋದಿ, ರೈಲ್ವೆೆ ಖಾತೆಯ ಸಚಿವರಾದ ಅಶ್ವಿಿನಿ ವೈಷ್ಣವ್ ಮತ್ತು ರಾಜ್ಯ ಸಚಿವರಾದ ವಿ ಸೋಮಣ್ಣ ಅವರ ಪ್ರಯತ್ನದಿಂದಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ವಂದೇ ಭಾರತ್ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಈ ಹಿಂದೆ ಬೆಳಗ್ಗೆೆ 5.10 ಕ್ಕೆೆ ಕಲಬುರಗಿಯಿಂದ ವಂದೇ ಭಾರತ್ ಸಂಚಾರ ಪ್ರಾಾರಂಭಿಸುತ್ತಿಿರುವುದರಿಂದ ಮಕ್ಕಳು, ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಂಚಾರಕ್ಕೆೆ ಅನಾನುಕೂಲವಾಗಿತ್ತು. ಬೀದರ್ ಮತ್ತಿಿತರ ಕಡೆಗಳಿಂದ ಆಗಮಿಸುತ್ತಿಿರುವ ಪ್ರಯಾಣಿಕರಿಗೂ ಕಷ್ಟ ಸಾಧ್ಯವಾಗಿದ್ದು ಇದೀಗ ನೂತನ ವೇಳಾಪಟ್ಟಿಿ ಅತ್ಯಂತ ಅನುಕೂಲಕರವಾಗಲಿದೆ. ಸಾರ್ವಜನಿಕರು ವಂದೇ ಭಾರತ್ ರೈಲು ಸೇವೆಯನ್ನು ಪೂರ್ಣವಾಗಿ ಬಳಸಿಕೊಳ್ಳುವಂತೆ ಡಾ.ಜಾಧವ್ ತಿಳಿಸಿದ್ದಾರೆ.
ಜ.1ರಿಂದ ಕಲಬುರಗಿ – ಬೆಂಗಳೂರು ವಂದೇ ಭಾರತ್ ರೈಲಿನ ಹೊಸ ವೇಳಾಪಟ್ಟಿ ಜಾರಿ : ಡಾ.ಜಾಧವ ಹರ್ಷ

