ಸುದ್ದಿಮೂಲ ವಾರ್ತೆ ರಾಯಚೂರು, ನ.03:
ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಹತ್ತಿಿ ಬೆಳೆಗಾರರಿಂದ ಭಾರತೀಯ ಹತ್ತಿಿ ನಿಗಮ ನಿಯಮಿತ (ಸಿಸಿಐ) ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ ಗುಣಮಟ್ಟದ ಹತ್ತಿಿ ಖರೀದಿ ಪ್ರಕ್ರಿಿಯೆ ಪ್ರಾಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹತ್ತಿಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಿಯೆ ಭಾರತೀಯ ಹತ್ತಿಿ ನಿಗಮದಿಂದ ಜಿಲ್ಲಾದ್ಯಂತ ವಿವಿಧ ಪ್ರಾಾಂಗಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿಯವರೆಗೆ ಸುಮಾರು 27,929 ರೈತರು ಹತ್ತಿಿ ಬೆಂಬಲ ಬೆಲೆ ಯೋಜನೆಯಡಿ ಕಪಾಸ್ ಕಿಸಾನ್ ಅಪ್ಲಿಿಕೇಶನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಈ ನೋಂದಣಿ ಪ್ರಕ್ರಿಿಯೆ ಹಾಗೂ ಖರೀದಿ ದಿನಾಂಕವನ್ನು ಡಿಸೆಂಬರ್ 31 ರವರೆಗೆ ಜಾರಿಯಲ್ಲಿದ್ದು, ಎಲ್ಲಾ ರೈತರು ಕಡ್ಡಾಾಯ ನೋಂದಾಯಿಸಿಕೊಂಡು ಹತ್ತಿಿ ಬೆಂಬಲ ಬೆಲೆ ಯೋಜನೆಯ ಸವಲತ್ತನ್ನು ಪಡೆಯಬಹುದಾಗಿದೆ. ಕನಿಷ್ಠ ಗುಣಮಟ್ಟದ ಮಾನದಂಡಗಳನ್ನು ಪೂರೈಸುವ, ಹತ್ತಿಿ ಮಾರಾಟದ ಹಣವು ನೇರವಾಗಿ ರೈತರ ಬ್ಯಾಾಂಕ್ ಖಾತೆಗೆ ಡಿಬಿಟಿ ಮೂಲಕ ಜಮಾ ಆಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

