ಸುದ್ದಿಮೂಲ ವಾರ್ತೆ ಬೀದರ್, ಡಿ.04:
ಪ್ರವಾದಿಯವರ 1500 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. 7 ರಂದು ಶರಣರ ನಾಡು ಬಸವಕಲ್ಯಾಾಣದ ಅಲ್ಫಾಾ ಮೈದಾನದಲ್ಲಿ ಸಂಜೆ ಸೂಫಿ-ಸಂತರ ಸಮ್ಮೇಳನ ಆಯೋಜಿಸಲಾಗುತ್ತಿಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಸಚೇತಕ ಹಾಗೂ ಎಂಎಲ್ಸಿಿ ಸಲೀಂ ಅಹ್ಮದ ತಿಳಿಸಿದರು.
ಈ ಕುರಿತು ಗುರುವಾರ ನಗರದಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡಿ, ಪ್ರವಾದಿಯವರ 1500 ನೇ ವಾರ್ಷಿಕೋತ್ಸವ ಆಚರಣೆ ಈಗಾಗಲೆ ಹುಬ್ಬಳ್ಳಿಿ ಮತ್ತು ಕೊಪ್ಪಳ ನಗರಗಳಲ್ಲಿ ಆಚರಿಸಲಾಗಿದ್ದು ಇದು ಮೂರನೆ ಸಮಾವೇಶವಾಗಿದೆ.
ಅಂತರರಾಷ್ಟ್ರೀಯ ಖ್ಯಾಾತಿಯ ವ್ಯಕ್ತಿಿ ಮೌಲಾನಾ ಮುಹಮ್ಮದ್ ಒಬೈದುಲ್ಲಾ ಖಾನ್ ಆಜ್ಮಿಿ, ರಾಜ್ಯಸಭೆಯ ಮಾಜಿ ಸದಸ್ಯ ಮತ್ತು ಅಖಿಲ ಭಾರತ ಮುಸ್ಲಿಿಂ ವೈಯಕ್ತಿಿಕ ಕಾನೂನು ಮಂಡಳಿಯ ಉಪಾಧ್ಯಕ್ಷ, ಮಂಡಳಿಯ ಸದಸ್ಯ ಮೌಲಾನಾ ಅಬು ತಾಲಿಬ್ ರಹಮಾನಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಕ್ಫ ಕಮಿಟಿ ಅಧ್ಯಕ್ಷರು ಹಾಗೂ ಹಜರತ್ ಹಫೀಜ್ ಅಲಿ ಮುಹಮ್ಮದ್ ಅಲ್ ಹುಸೈನಿ, ಖ್ವಾಾಜಾ ಬಂದಾ ನವಾಜ್ ದರ್ಗಾದ ಸಜ್ಜಾಾದಾ ಅವರನ್ನು ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್, ಮಾಜಿ ಎಂಎಲ್ಸಿ ಅರವಿಂದ್ ಕುಮಾರ್ ಅರಳಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸಿರ್ ಹುಸೇನ್, ಉತ್ತರ ಪ್ರದೇಶದ ಉಸ್ತುವಾರಿ ಸಂಸದ ಇಮ್ರಾಾನ್ ಮಸೂದ್, ತೆಲಂಗಾಣದ ಅಲ್ಪಸಂಖ್ಯಾಾತ ವ್ಯವಹಾರಗಳ ಸಚಿವ ಮೊಹಮ್ಮದ್ ಅಜರುದ್ದೀನ್ (ಹೈದ್ರಾಾಬಾದ್) ಮತ್ತು ಕೆಕೆಆರ್ಡಿಬಿ ಅಧ್ಯಕ್ಷ ಮತ್ತು ಶಾಸಕ ಡಾ. ಅಜಯ್ ಸಿಂಗ್ ಭಾಗವಹಿಸಲಿದ್ದಾರೆ ಎಂದರು.
ಮಾಜಿ ಶಾಸಕ ವಿಜಯಸಿಂಗ್ ಮಾತನಾಡಿ, ಪಕ್ಕದ ಸೂಫಿ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸರ್ವ ಸಿದ್ಧತೆ ನಡೆಸಲಾಗುತ್ತಿಿದೆ. ಸಮ್ಮೇಳನಕ್ಕೆೆ ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ತೆಲಂಗಾಣದ ಅನೇಕರು ಭಾಗವಹಿಸಲಿದ್ದಾರೆ. ಪ್ರವಾದಿ ಅವರ 1500 ನೇ ಭವ್ಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಲಿರುವ ಸೂಫಿ ಸಂತ ಸಮ್ಮೇಳನದಲ್ಲಿ ಹೆಚ್ಚಿಿನ ಸಂಖ್ಯೆೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಕೋರಿದರು.
ಪತ್ರಿಿಕಾಗೋಷ್ಟಿಿಯಲ್ಲಿ ಕಾಂಗ್ರೆೆಸ್ ಮುಖಂಡ ಅಬ್ದುಲ್ ಮನ್ನಾಾನ್ ಸೇಠ್, ಪ್ರಧಾನ ಕಾರ್ಯದರ್ಶಿ ದತ್ತಾಾತ್ರಿಿ ಮೂಲಗೆ ಮೊದಲಾದವರು ಉಪಸ್ಥಿಿತರಿದ್ದರು.

