ಸುದ್ದಿಮೂಲ ವಾರ್ತೆ ಬೆಂಗಳೂರು, ನ.06:
ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆೆ ಬಗ್ಗೆೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಿಗೆ ಕೂತು ಸವಿಸ್ತಾಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆೆ ಒಂದು ದಿನ ಚರ್ಚೆ ನಡೆಯುತ್ತಿಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಿಲ್ಲ ಎಂದು ಟೀಕಿಸಿದರು.
ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆೆಗಳನ್ನು ಚರ್ಚಿಸಲು ತೀರ್ಮಾನಿಸಿದ್ದೇವೆ. ಕಬ್ಬಿಿನ ಬೆಳೆಗಾರರ ಸಮಸ್ಯೆೆ ಪರಿಹಾರವಾಗಿಲ್ಲ. ಮೆಕ್ಕೆೆ ಜೋಳ ಬೆಳೆಯುವ ರೈತರು 54 ಲಕ್ಷ ಮೆಟ್ರಿಿಕ್ ಟನ್ ಉತ್ಪಾಾದನೆ ಮಾಡಿದ್ದಾರೆ. ಆದರೆ, ಕಾಂಗ್ರೆೆಸ್ ಸರಕಾರ ಖರೀದಿ ಕೇಂದ್ರವನ್ನೂ ಪ್ರಾಾರಂಭಿಸಿಲ್ಲ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಖರೀದಿ ಕೇಂದ್ರದ ಮೂಲಕ 5 ಲಕ್ಷ ಮೆಟ್ರಿಿಕ್ ಟನ್ ಖರೀದಿಗೆ ಆದೇಶ ಮಾಡಿದ್ದಾರೆ. ಮತ್ತೊೊಂದು ಕಡೆ ತೊಗರಿ, ಉದ್ದು, ಭತ್ತ ಖರೀದಿ ಕೇಂದ್ರ ಆರಂಭಿಸಿಲ್ಲ. ತುಂಗಭದ್ರಾಾ ಜಲಾಶಯ ಗೇಟ್ ಅಳವಡಿಕೆ ಕಾರ್ಯವನ್ನು ತಡವಾದರೂ ಎಚ್ಚತ್ತುಕೊಂಡು 32 ಗೇಟ್ ಅಳವಡಿಸುವ ನಿಟ್ಟಿಿನಲ್ಲಿ ಕಾರ್ಯ ಆರಂಭಿಸಿದಂತಿದೆ ಎಂದು ತಿಳಿಸಿದರು.
ಇದೇ 9ರಂದು ಸುಮಾರು 15ರಿಂದ 20 ಸಾವಿರ ರೈತರ ಜೊತೆ ಸುವರ್ಣಸೌಧಕ್ಕೆೆ ಮುತ್ತಿಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿ.ವೈ.ವಿಜಯೇಂದ್ರ ಅವರು ವಿವರ ನೀಡಿದರು.
ರಾಜ್ಯದ ರೈತವಿರೋಧಿ ಕಾಂಗ್ರೆೆಸ್ ಸರಕಾರವನ್ನು ಬಡಿದೆಬ್ಬಿಿಸಲು ಮುಂದಾಗುತ್ತೇವೆ. ನಂತರ ಸದನದಲ್ಲೂ ಚರ್ಚಿಸುತ್ತೇವೆ. ತುಂಗಭದ್ರಾಾ ಜಲಾಶಯ ಗೇಟ್ ಅಳವಡಿಕೆ ಕಾರ್ಯ ವಿಳಂಬವಾಗಿದ್ದು, ಇದರಿಂದ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಿಲ್ಲ; ಆದ್ದರಿಂದ ಅಲ್ಲಿನ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಅವರು ಆಗ್ರಹಿಸಿದರು. ಇವೆಲ್ಲ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಭ್ರಷ್ಟಾಾಚಾರದ ವಿಚಾರದಲ್ಲಿ ತಮ್ಮ ಸರಕಾರಕ್ಕೆೆ ಕ್ಲೀನ್ ಚಿಟ್ ನೀಡುವ ಕಾರ್ಯ ಮಾಡಿದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಶೇ 40 ಭ್ರಷ್ಟಾಾಚಾರದ ಆರೋಪ ಮಾಡಿದ್ದರು. ಕಾಂಗ್ರೆೆಸ್ ಸರಕಾರವೇ ರಚಿಸಿದ ತನಿಖಾ ಆಯೋಗ ಬಳಿಕ ಕ್ಲೀನ್ ಚಿಟ್ ಕೊಟ್ಟಿಿದೆ. ಅದರ ಮಾಹಿತಿ ಸಿದ್ದರಾಮಯ್ಯನವರಿಗೆ ಇಲ್ಲವೇ? ನೀವು ಭ್ರಷ್ಟಾಾಚಾರದ ವಿಚಾರದಲ್ಲಿ ಸರಕಾರಕ್ಕೆೆ ಕ್ಲೀನ್ ಚಿಟ್ ಕೊಟ್ಟುಕೊಳ್ಳುವಿರಾ ಎಂದು ಪ್ರಶ್ನಿಿಸಿದರು.
ಮುಖ್ಯಮಂತ್ರಿಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಿಯವರು ಇಡೀ ದೇಶದಲ್ಲಿ ಕರ್ನಾಟಕವು ಭ್ರಷ್ಟಾಾಚಾರದಲ್ಲಿ ನಂಬರ್ 1 ಸ್ಥಾಾನದಲ್ಲಿದೆ ಎಂದಿದ್ದರು. ಇದು ಅಭಿವೃದ್ಧಿಿ ವಿಚಾರದಲ್ಲಿ ಅಲ್ಲ ಎಂದು ಗಮನ ಸೆಳೆದರು. ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಭ್ರಷ್ಟಾಾಚಾರದ ವಿಚಾರದಲ್ಲಿ ಹೇಳಿದ್ದು ಬಹಿರಂಗವಾಗಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಸ್ವತಃ ಮುಖ್ಯಮಂತ್ರಿಿಗಳು ಸದನದಲ್ಲೇ ಒಪ್ಪಿಿಕೊಂಡಿದ್ದರು. ಹಗರಣದ ಮೊತ್ತ ಕಡಿಮೆ ಎಂದಿದ್ದರು. ಇದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ಮರೆತು ಹೋಗಿದೆಯೇ ಎಂದು ಕೇಳಿದರು.
ಮುಡಾ ಹಗರಣವನ್ನು ರಾಜ್ಯದ ಜನರು ಮರೆತಿಲ್ಲ ಎಂದ ಅವರು, ನೀವ್ಯಾಾಕೆ ನಿವೇಶನಗಳನ್ನು ಹಿಂತಿರುಗಿಸಿದ್ದೀರಿ. ಇದು ಭ್ರಷ್ಟಾಾಚಾರವಲ್ಲವೇ? ಭ್ರಷ್ಟಾಾಚಾರ ಕುರಿತು ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆೆಸ್ ಸರಕಾರಕ್ಕೆೆ ಇಲ್ಲ. ನಿಮ್ಮ ಬಣ್ಣ ಬಯಲಾಗಿದೆ. ಅಭಿವೃದ್ಧಿಿ ಕೆಲಸ ನಡೆಯುತ್ತಿಿಲ್ಲ. ಸಂಕಷ್ಟದಲ್ಲಿರುವ ರೈತರ ಮನವಿಗೆ ಸ್ಪಂದಿಸುವ ಕೆಲಸ ನೀವು ಮಾಡಿಲ್ಲ. ಬಿಜೆಪಿ- ಜೆಡಿಎಸ್ ಜೊತೆ ಸೇರಿ ಈ ಸರಕಾರದ ಕಿವಿ ಹಿಂಡುತ್ತೇವೆ ಎಂದು ತಿಳಿಸಿದರು.

