ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.09:
ಗ್ರೇೇಟರ್ ಬೆಂಗಳೂರು ಪ್ರಾಾಧಿಕಾರದ ವ್ಯಾಾಪ್ತಿಿಯಲ್ಲಿ ಇ-ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಿ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ವಿಧಾನಸಭೆ ಪ್ರಶ್ನೋೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರ ಪ್ರಶ್ನೆೆಗೆ ಉತ್ತರಿಸಿದ ಅವರು, ಜಿಬಿಎ ವ್ಯಾಾಪ್ತಿಿಯಲ್ಲಿ ಇ ಖಾತೆ ಯೋಜನೆಯಡಿ ಜಿಬಿಎ ವ್ಯಾಾಪ್ತಿಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.
ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು
ಜಿಬಿಎ ವ್ಯಾಾಪ್ತಿಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಾಪುರ ವ್ಯಾಾಪ್ತಿಿಯಲ್ಲಿ ಈ ಹಿಂದೆ ಮುಚ್ಚಿಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು ಎನ್ನುವ ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆೆಗೆ ಉತ್ತರಿಸಿದ ಡಿಸಿಎಂ ಅವರು, ದೊಡ್ಡಬಳ್ಳಾಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂದಲಹಳ್ಳಿಿಯಲ್ಲಿ ಒಟ್ಟು 134.10 ಎಕರೆ ಹಾಗೂ ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿಿ ಹೋಬಳಿಯ ಗೊಲ್ಲಹಳ್ಳಿಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 26 ಎಕರೆ ಪ್ರದೇಶದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕವನ್ನು ಪ್ರಾಾರಂಭ ಮಾಡಲಾಗಿದೆ. ನಗರದ ನಾಲ್ಕು ಭಾಗದಲ್ಲೂ ವೈಜ್ಞಾನಿಕ ಕಸ ವಿಲೇವಾರಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿಿರುವೆ. ಕಸದಿಂದ ಗ್ಯಾಾಸ್, ಬಯೋ ಗ್ಯಾಾಸ್ ಉತ್ಪಾಾದನೆ ಬಗ್ಗೆೆ ಹೆಚ್ಚು ಗಮನ ಹರಿಸುತ್ತಿಿದ್ದೇವೆ ಎಂದರು.
ಕಸದ ಮಾಫಿಯಾವನ್ನು ಬಗ್ಗುಬಡಿಯಲು ಹೊಸ ಕಾಯ್ದೆೆ ತನ್ನಿಿ ವಿರೋಧ ಪಕ್ಷವು ಬೆಂಬಲ ನೀಡುತ್ತದೆ ಎಂದು ಅಶೋಕ್ ಅವರು ಹೇಳಿದಾಗ ಅದಕ್ಕೆೆ ಪ್ರತಿಕ್ರಿಿಯೆ ನೀಡಿದ ಡಿಸಿಎಂ ಅವರು, ಕಸದ ಮಾಫಿಯಾ ಮಟ್ಟ ಹಾಕಲು ಕಾನೂನಿನಲ್ಲಿ ಏನೆಲ್ಲಾ ಅವಕಾಶವಿದೆ ಎಂಬುದನ್ನು ನೋಡುತ್ತೇನೆ. ಇದರ ಬಗ್ಗೆೆ ಕ್ರಮ ತಗೆದುಕೊಳ್ಳಲಾಗುವುದು. ಬಿಜೆಪಿ ಸಮಯದಲ್ಲಿ 89 ಪ್ಯಾಾಕೇಜ್ ಗಳನ್ನು ಕಸ ವಿಲೇವಾರಿಗೆ ತರಲಾಗಿತ್ತು. ಇದನ್ನು ಜಾರಿಗೆ ತರಲು ಆಗಲೇ ಇಲ್ಲ. ನ್ಯಾಾಯಾಲಯಕ್ಕೆೆ ತೆರಳಿದ್ದರು. ಈಗ ಏನೇನೋ ಮಾಡಿ 33 ಪ್ಯಾಾಕೇಜ್ ಗಳನ್ನು ತರಲಾಗಿದೆ ಎಂದರು.
ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ರೌಂಡ್ ರಾಬಿನ್ ಪದ್ದತಿ ರದ್ದು: ಹಳೆ ಪದ್ಧತಿಯಲ್ಲೇ ಇ- ಖಾತೆ ಅರ್ಜಿ ವಿಲೇವಾರಿ

