ಸುದ್ದಿಮೂಲ ವಾರ್ತೆ ರಾಯಚೂರು, ಡಿ.11:
ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಾಗೂ ಹೊಸ ಉದ್ಯಮಶೀಲರನ್ನು ಪ್ರೋೋತ್ಸಾಾಹಿಸುವ ನಿಟ್ಟಿಿನಲ್ಲಿ ರಾಯಚೂರಿನ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಬೆಂಗಳೂರಿನ ಭಾರತೀಯ ರ್ತು ಉತ್ತೇಜನ ಸಂಸ್ಥೆೆ ಇವರ ಸಂಯುಕ್ತಾಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವು ನಗರದ ಹೈದ್ರಾಾಬಾದ್ ರಸ್ತೆೆಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಬುಧವಾರ ಯಶಸ್ವಿಿಯಾಗಿ ನಡೆಯಿತು.
ಬೆಂಗಳೂರಿನ ಫಿವೋ ಉಪ ನಿರ್ದೇಶಕರಾದ ಧನೀಶಾ ಮೀನು ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಾಗೂ ಹೊಸ ಉದ್ಯಮಶೀಲರನ್ನು ಪ್ರೋೋತ್ಸಾಾಹಿಸುವ ವಿಷಯಗಳು ಮತ್ತು ರ್ತು ವ್ಯಾಾಪಾರದ ಟ್ರೇೇಡ್ ಪಾಲಿಸಿ-2023ರ ಕುರಿತು ಸವಿಸ್ತಾಾರವಾಗಿ ಮಾತನಾಡಿದರು.
ಬೆಂಗಳೂರಿನ ಕಸ್ಟಮ್ಸ್ ಹೌಸ್ ಏಜೆಂಟ್ಸ್ ಅಸೋಷಿಯೇಶನ್ ಲಿಮಿಟೆಡ್ ಕಾರ್ಯದರ್ಶಿ ಗಿರೀಶ್ ನಾರಾಯಣ್ ಅವರು, ರ್ತು ವ್ಯಾಾಪಾರದ ಕುರಿತು ಅಗತ್ಯ ದಾಖಲಾತಿಗಳನ್ನು ಹೇಗೆ ತಯಾರಿಸುವುದು ಹಾಗೂ ಅಂತರಾಷ್ಟ್ರೀಯ ವ್ಯಾಾಪಾರ, ಸುಂಕ ತೆರಿಗೆ ಈ ವಿಷಯದ ಕುರಿತು ಸವಿಸ್ತಾಾರವಾಗಿ ಕಾರ್ಯಾಗಾರದಲ್ಲಿ ತಿಳಿಸಿದರು.
ಈ ವೇಳೆ ಹೈದ್ರಾಾಬಾದಿನ ಇಸಿಜಿಸಿ ಲಿಮಿಟೆಡ್ ಸಹಾಯಕ ವ್ಯವಸ್ಥಾಾಪಕ ಭರತ್ ಗುಂಟೂರು ಅವರು ಮಾತನಾಡಿ, ಇನ್ವಾಾಯಿಸ್, ಪ್ಯಾಾಕಿಂಗ್ ಲಿಸ್ಟ್, ಕಸ್ಟಮ್ಸ ಕ್ಲಿಿಯರ್ಸ್ೆ, ರ್ತು ವಿಮೆ ಮೂಲಕ ಸಿಗುವ ರಕ್ಷಣೆಗಳು, ಲಾಜಿಸ್ಟಿ್ಸಿೃ್ ಮತ್ತು ಶಿಪ್ಪಿಿಂಗ್ ಸರಕುಗಳನ್ನು ಸುರಕ್ಷಿತವಾಗಿ ವಿದೇಶಕ್ಕೆೆ ಕಳುಹಿಸುವ ವಿಧಾನಗಳು ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಆನ್ಲೈನ್ ಮೂಲಕ ವಿದೇಶಿ ಗ್ರಾಾಹಕರನ್ನು ತಲುಪುವುದು ಹೇಗೆ ಎಂಬುದರ ಬಗ್ಗೆೆ ತಿಳಿಸಿದರು.
ಈ ವೇಳೆ ಬೆಂಗಳೂರಿನ ಎ್.ಕೆ.ಸಿ.ಸಿ.ಐ ನಿರ್ದೇಶಕರು ಹಾಗೂ ಜಿಲ್ಲಾ ವಾಣಿಜ್ಯೋೋದ್ಯಮ ಸಂಘದ ನಿಕಟಪೂರ್ವ ಅಧ್ಯಕ್ಷ ತ್ರಿಿವಿಕ್ರಮ ಜೋಶಿ ಅವರು ಮಾತನಾಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ರಾಯಚೂರು ಕಚೇರಿಯ ಉಪನಿರ್ದೇಶಕ ರಾಜಕುಮಾರ್ ಪಾಟೀಲ್ ಇವರು ಪ್ರಾಾಸ್ತಾಾವಿಕವಾಗಿ ಮಾತನಾಡಿ, ಇಲಾಖೆಯ ಯೋಜನೆಗಳ ಕುರಿತು ಸವಿಸ್ತಾಾರವಾಗಿ ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಸತೀಶಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಕ್ಕಿಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿಿ ಪುರುಷೋತ್ತಮ್, ಕಾಟನ್ ಮಿಲ್ಲರ್ಸ್ ಸಂಘದ ಅಧ್ಯಕ್ಷರಾದ ವಿ. ಲಕ್ಷ್ಮೀರೆಡ್ಡಿಿ, ಕಾರ್ಯದರ್ಶಿ ಜಂಬಣ್ಣ ಯಕ್ಲಾಾಸಪೂರು ಇನ್ನಿಿತರರು ಇದ್ದರು. ಕಚೇರಿಯ ಸಹಾಯಕ ನಿರ್ದೇಶಕ ಲಕ್ಷ್ಮೀಕಾಂತ್ ಕುಲಕರ್ಣಿ ವಂದಿಸಿದರು.
ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಕಾರ್ಯಾಗಾರ ಯಶಸ್ವಿ

