ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.16:
ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ‘ಎ’ ಗ್ರೂಪ್ ಗುರುತಿಸಿ ಪ್ರತ್ಯೇಕ ಮೀಸಲಾತಿ ಸೌಲಭ್ಯ ನೀಡಲು ಆಗ್ರಹಿಸಿ ಡಿಸೆಂಬರ್ 19 ರಂದು ಬೆಳಗಾವಿ ಚಲೋ ಹಮ್ಮಿಿಕೊಳ್ಳಲಾಗಿದೆ ಎಂದು ಅಲೆಮಾರಿ ಸಮುದಾಯಗಳ ಜಿಲ್ಲಾಾಧ್ಯಕ್ಷ ಶಿವಕುಮಾರ್ ಅವರು ತಿಳಿಸಿದ್ದಾಾರೆ.
ಪತ್ರಿಿಕಾಭವನದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 59 ಅಲೆಮಾರಿ ಸಮುದಾಯಗಳಿಗೆ ಶೇ. 1 ರ ಮೀಸಲಾತಿ ನೀಡಲಾಗಿದೆ. ಅಲೆಮಾರಿ ಸಮುದಾಯಗಳಿಗೆ ಭಾರತದಲ್ಲೇ ಮಾದರಿಯಾಗುವ ರೀತಿಯಲ್ಲಿ ವಿಶೇಷ ಪ್ಯಾಾಕೇಜ್ ಘೋಷಣೆ ಮಾಡಬೇಕು. 49 ನೈಜ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಾಪಿಸಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲಾಗುತ್ತದೆ ಎಂದರು.
ಈ ಕುರಿತು ಕರ್ನಾಟಕ ಸರ್ಕಾರ ನ್ಯಾಾಯಾಲಯಕ್ಕೆೆ ಸಲ್ಲಿಸಿರುವ ಅಫಿಡವಿಟ್ ಹಿಂಪಡೆದು, ಪ್ರತ್ಯೇಕ ಮೀಸಲಾತಿ ನೀತಿ ರೂಪಿಸಬೇಕು ಎಂದು ಅವರು ಆಗ್ರಹಿಸಿದರು.
ಅಲೆಮಾರಿ ಸಮುದಾಯಗಳ ಸಂಘಟನೆಗಳ ಮುಖಂಡರಾದ ಸುಬ್ಬಣ್ಣ, ಕಲ್ಯಾಾಣಂ ಶಂಕರ್, ಮಹೇಶ್, ಗುಂಡಪ್ಪ ಕಟ್ಟಿಿಮನಿ, ರಾಮಾಂಜಿನಿ, ಡಿ. ಬಾಬು ಸೇರಿದಂತೆ ಇತರೆ ಮುಖಂಡರು ಸುದ್ದಿಗೋಷ್ಠಿಿಯಲ್ಲಿ ಉಪಸ್ಥಿಿತರಿದ್ದರು.

