ಗೋಕರ್ಣ, ಡಿ.19:
ಅಧಿಕಾರ ಹಂಚಿಕೆಯ ಬಗ್ಗೆೆ ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರೆ, ಅತ್ತ ಗೋಕರ್ಣಕ್ಕೆೆ ತೆರಳಿದ್ದ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ನನ್ನ ಹಾಗೂ ಸಿಎಂ ಮಧ್ಯೆೆ ನಡುವೆ ಒಪ್ಪಂದ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿಿರು ಚಳಿಗಾಲದ ಅಧಿವೇಶನದ ಮಧ್ಯೆೆಯೂ ಗೋಕರ್ಣಕ್ಕೆೆ ತೆರಳಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀ ಮಹಾಬಲೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧಿವೇಶದನದಲ್ಲಿ ಸಿಎಂ ಹೇಳಿಕೆಯ ಬಗ್ಗೆೆ ಪ್ರಶ್ನಿಿಸಿದಾಗ, ’ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆೆ ತಂದಿದೆ. ಆ ಪ್ರಕಾರ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ’ ಎಂದು ಮತ್ತೆೆ ಚರ್ಚೆ ಹುಟ್ಟುಹಾಕಿದರು.
ನಮ್ಮ ಮಧ್ಯೆೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆೆ ಕೇಳಿದಾಗ, ’ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆೆ ಅವರು ರಾಜ್ಯದ ಸಿಎಂ ಆಗಿದ್ದಾರೆ’ ಎಂದರು.
ಸಿಎಂ ಬದಲಾವಣೆ ಆಗುವುದಿಲ್ಲವೇ ಎಂದು ಕೇಳಿದಾಗ, ’ನೀವು ಆ ಬಗ್ಗೆೆ ಚರ್ಚೆ ಮಾಡುತ್ತಿಿದ್ದೀರಿ. ನಮ್ಮಲ್ಲಿ ಅದು ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ’ ಎಂದರು.
ಕಳೆದ ಬಾರಿ ಬಂದಾಗ ನಿಮ್ಮ ಇಷ್ಟಾಾರ್ಥ ಸಿದ್ಧಿಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಆಗುವುದೇ ಎಂದು ಕೇಳಿದಾಗ, ’ಅದೆಲ್ಲವನ್ನು ನಾನು ಹೇಳುವುದಿಲ್ಲ. ಇದು ನನ್ನ ಹಾಗೂ ಆ ತಾಯಿ ಮಧ್ಯೆೆ ಇರುವ ವಿಚಾರ. ಭಕ್ತ ಹಾಗೂ ಭಗವಂತನ ನಡುವಣ ವಿಚಾರ. ವಿಘ್ನ ನಿವಾರಕ ವಿಘ್ನೇಶ್ವರನ ದರ್ಶನ ಪಡೆದಿದ್ದೇನೆ. ಮಹಾಬಲೇಶ್ವರನಿಗೆ ಪೂಜೆ ಮಾಡಿದ್ದೇನೆ, ಗಂಗಾಧರೇಶ್ವರನಿಗೆ ಪ್ರಾಾರ್ಥನೆ ಮಾಡಿದ್ದೇನೆ ಎಂದರು.
ಹಸನ್ಮುಖಿಯಾಗಿ ತೆರಳುತ್ತಿಿದ್ದೇನೆ :
ಇಂದು ಗೋಕರ್ಣಕ್ಕೆೆ ಬಂದಿದ್ದು ದೇವರ ದರ್ಶನ ಭಾಗ್ಯ ನನಗೆ ಸಿಕ್ಕಿಿದೆ. ಐದು ವರ್ಷಗಳ ಹಿಂದೆ ಜಗದೇಶ್ವರಿ ತಾಯಿಯ ಬಳಿಗೆ ಬಂದು, ನಮ್ಮ ಕುಟುಂಬದ ವಿಚಾರವಾಗಿ ಪ್ರಾಾರ್ಥನೆ ಮಾಡಿದ್ದೆ. ಮತ್ತೆೆ ಇಲ್ಲಿಗೆ ಬರುವುದಾಗಿ ಪ್ರಾಾರ್ಥಿಸಿದ್ದೆ. ಅದರಂತೆ ಬಂದು ಜಗದೇಶ್ವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಮಾಡು ತಾಯಿ ಎಂದು ಪ್ರಾಾರ್ಥನೆ ಮಾಡಿರುವೆ. ನನಗೆ ಹಾಗೂ ರಾಜ್ಯಕ್ಕೆೆ ಒಳ್ಳೆೆಯದಾಗಲಿ ಎಂದು ಪ್ರಾಾರ್ಥಿಸಿರುವೆ. ಹಸನ್ಮುಖಿಯಾಗಿ ಇಲ್ಲಿಂದ ತೆರಳುತ್ತಿಿದ್ದೇನೆ ಎಂದು ತಿಳಿಸಿದರು.

