ಸುದ್ದಿಮೂಲ ವಾರ್ತೆ ರಾಯಚೂರು, ಡಿ.21:
ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಬಹುದೊಡ್ಡ ಕೃಷ್ಣಾಾ ಮೇಲ್ಸೇತುವೆ ಬಾಕಿ ಇರುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಉಭಯ ರಾಜ್ಯಗಳ ಮುಖ್ಯಮಂತ್ರಿಿಗಳು ಕ್ರಮ ವಹಿಸಬೇಕೆಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಮನವಿ ಮಾಡಿದ್ದಾರೆ.
ಟೆಂಡರ್ ಪ್ರಕಾರ ಈ ಕಾಮಗಾರಿ ನವೆಂಬರ್ 6, 2021 ರಂದು ಆರಂಭವಾಗಿ ಇದೇ ವರ್ಷ ಅಕ್ಟೋೋಬರದೊಳಗೆ ಪೂರ್ಣಗೊಳಿಸಬೇಕಾಗಿತ್ತು. ಆದರೆ, ಕಾಮಗಾರಿ ಪ್ರಗತಿ ಹಂತದಲ್ಲಿದ್ದು ವೇಗ ಪಡೆದುಕೊಂಡಿಲ್ಲ ನಿರೀಕ್ಷಿಿತ ಮಟ್ಟದಲ್ಲಿ ಕೆಲಸವಾಗಿಲ್ಲ ಎಂದು ದೂರಿದರು.
ಹಳೆಯ ಸೇತುವೆ ಶಿಥಿಲಾವಸ್ಥೆೆಗೆ ತಲುಪಿದ್ದು ಯಾವ ಗಳಿಗೆಯಲ್ಲಿ ಏನಾಗುತ್ತದೆ ಎಂಬ ಆತಂಕ ಇರುವುದರಿಂದ ಹೊಸ ಸೇತುವೆ ಆದಷ್ಟು ಬೇಗನೆ ಪೂರ್ಣಗೊಳಿಸಬೇಕಾಗಿದೆ.
ಎರಡು ರಾಜ್ಯಗಳಿಂದ ಜನ ಹೆಚ್ಚಿಿನ ಪ್ರಮಾಣದಲ್ಲಿ ಪ್ರಯಾಣಕ್ಕೆೆ ಇದೇ ಸೇತುವೆ ಉಪಯೋಗಿಸುತ್ತಿಿರುವುದರಿಂದ ಶೀಘ್ರ ಪೂರ್ಣಗೊಳಿಸಿದರೆ ಹೆಚ್ಚಿಿನ ಅನುಕೂಲವಾಗುತ್ತದೆ ಆದ್ದರಿಂದ ಸಂಬಂಧಪಟ್ಟ ಮಂತ್ರಿಿಗಳು ಹಾಗೂ ಉಭಯ ರಾಜ್ಯಗಳ ಮುಖ್ಯಮಂತ್ರಿಿಗಳು ಈ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಬೇಕೆಂದು ಕೋರಿದ್ದಾಾರೆ.
ಕೃಷ್ಣಾ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ

