ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.23:
ರೈತ ಬೆಳೆದ ಬೆಳೆಗಳಿಗೆ ವೈಜ್ಞಾಾನಿಕ ಬೆಲೆ ಸಿಗಬೇಕಾದರೆ ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ದವಾಗಿ ಜಾರಿಯಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಾಧ್ಯಕ್ಷ ಕೋಡಿಹಳ್ಳಿಿ ಚಂದ್ರಶೇಖರ ಆಗ್ರಹಿಸಿದರು.
ನಗರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ, ಜೈ ಜವಾನ ಜೈ ಕಿಸಾನ ಸೇವಾ ಸಂಘದ ನೇತೃತ್ವದಲ್ಲಿ ಹಮ್ಮಿಿಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಂಎಸ್ಪಿ ಜಾರಿಯಾದರೆ ಮಾರುಕಟ್ಟೆೆಯಲ್ಲಿ ಬೆಲೆ ಕುಸಿತ ಸಂದರ್ಭದಲ್ಲಿ ಸರಕಾರವೇ ರೈತರ ಉತ್ಪನ್ನಗಳನ್ನು ಖರೀದಿ ಮಾಡುತ್ತದೆ. ಇದರಿಂದ ರೈತರಿಗೆ ಕನಿಷ್ಟ ಬೆಲೆಯಾದರೂ ಸಿಗಲಿದೆ. ಈ ಬಗ್ಗೆೆ ಜಾಗೃತಿ ಮೂಡಿಸುವ ಮೂಲಕ ಸರಕಾರದ ವಿರುದ್ದ ಜನಾಂದೋಲನ ರೂಪಿಸಬೇಕು ಎಂದರು.
ತುಂಗಭದ್ರಾಾ ಈ ಭಾಗದ ಜೀವನಾಡಿ. ಸುಮಾರು 32 ಟಿಎಂಸಿಯಷ್ಟು ಹೂಳು ತುಂಬಿದ್ದರಿಂದ ನೀರಿನ ಸಮಸ್ಯೆೆ ಎದುರಾಗುತ್ತದೆ. ಸರಕಾರ ಈ ಬಗ್ಗೆೆ ಗಂಭೀರ ಚಿಂತನೆ ಮಾಡುವ ಅಗತ್ಯವಿದೆ. ಹೂಳು ತೆಗೆಸಬೇಕು. ಇಲ್ಲದಿದ್ದರೆ ನವಲಿ ಸಮನಾಂತರ ಜಲಾಶಯ ನಿರ್ಮಿಸಬೇಕು ಎಂದು ಒತ್ತಾಾಯಿಸಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಎಲ್ಲಾಾ ವಸ್ತುಗಳ ಬೆಲೆಯನ್ನು ಉತ್ಪಾಾದಕರು ನಿರ್ಧರಿಸುತ್ತಾಾರೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ಬೆಲೆ ವರ್ತಕರು ನಿರ್ಧರಿಸುತ್ತಾಾರೆ. ಬೆಲೆಯಿಲ್ಲದೇ ಅನ್ನದಾತನ ಬದುಕು ದುಸ್ತರವಾಗಿದೆ. ಯಾವುದೇ ಸರಕಾರಗಳು ಬಂದರೂ ರೈತರಿಗೆ ನ್ಯಾಾಯ ಕೊಡಿಸಲು ಸಾಧ್ಯವಾಗಿಲ್ಲ. ರೈತಪರ ಸಂಘಟನೆಗಳು ಹೆಚ್ಚು ಬಲಗೊಳ್ಳಬೇಕಿದೆ ಎಂದರು.
ರಂಭಾಪುರಿ ಕಾಸಾಶಾಖಾಮಠದ ಸೋಮನಾಥ ಶಿವಾಚಾರ್ಯರು, ತುರ್ವಿಹಾಳ ಅಮೋಘ ಸಿದ್ದೇಶ್ವರಮಠದ ಮಾದಯ್ಯ ಗುರುವಿನ್, ಬಂಗಾರಿ ಕ್ಯಾಾಂಪಿನ ಶರಣರು ಸಾನಿಧ್ಯವಹಿಸಿದ್ದರು. ಬಸವರಾಜ ಗೋಡಿಹಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಡಿಸಿಸಿ ಬ್ಯಾಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಬಿಜೆಪಿ ಮುಖಂಡ ರಾಜೇಶ ಹಿರೇಮಠ, ತಿಮ್ಮಣ್ಣ ಸಾಹುಕಾರ, ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗವೇಣಿ ಪಾಟೀಲ್, ಮಹಾದೇವಮ್ಮ, ಸುವರ್ಣ ಹಿರೇಮಠ, ಸಿಪಿಐಎಂನ ಎಂ.ಗಂಗಾಧರ, ಬಸವರಾಜ ಗೊರೇಬಾಳ, ಪರಶುರಾಮ, ರವಿಕುಮಾರ, ವೀರೇಶ ದಿದ್ದಿಗಿ, ನಾರಾಯಣ ಬೆಳಗುರ್ಕಿ, ಸಿದ್ದನಗೌಡ ಗೋನವಾರ, ಮಾಳಪ್ಪ ಪೂಜಾರಿ, ದೊಡ್ಡನಗೌಡ ಕಲ್ಲೂರು, ಹನುಮಂತಪ್ಪ ಗೋಡಿಹಾಳ ಸೇರಿದಂತೆ ಇತರರು ಇದ್ದರು.
ಎಂಎಸ್ಪಿ ಕಾನೂನು ಬದ್ದವಾಗಿ ಜಾರಿಯಾಗಲಿ – ಕೋಡಿಹಳ್ಳಿ ಚಂದ್ರಶೇಖರ

