ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.31
ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರಕಾರ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆೆಯನ್ನು (ಎನ್ಐಪಿಇಆರ್) ಆರಂಭಿಸಬೇಕು. ಇದಕ್ಕೆೆ ಬೇಕಾದ ಭೂಮಿ, ಮೂಲಸೌಕರ್ಯ, ನೆರವು ಮತ್ತು ಸಹಭಾಗಿತ್ವದ ಅವಕಾಶಗಳನ್ನು ರಾಜ್ಯ ಸರಕಾರವು ಕ್ಷಿಪ್ರ ಗತಿಯಲ್ಲಿ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾಾ ಅವರಿಗೆ ಪತ್ರ ಬರೆದು, ಮನವಿ ಮಾಡಿಕೊಂಡಿದ್ದಾರೆ.
ಈ ಪತ್ರದಲ್ಲಿ ಅವರು, ಹಿಂದೊಮ್ಮೆೆ ಈ ಕೇಂದ್ರವನ್ನು ಕರ್ನಾಟಕದಲ್ಲಿ ಪ್ರಾಾರಂಭಿಸಬೇಕೆಂದು ಕೇಂದ್ರ ಸರಕಾರವು ಆಲೋಚಿಸಿತ್ತು. ಆದರೆ ಅದು ಕಾರ್ಯರೂಪಕ್ಕೆೆ ಬರಲಿಲ್ಲ. ರಾಜ್ಯದಲ್ಲಿರುವ ವೈಜ್ಞಾನಿಕ ಸಂಶೋಧನಾ ಸಂಸ್ಥೆೆಗಳು, ಜೈವಿಕ ತಂತ್ರಜ್ಞಾನ (ಬಿ.ಟಿ.) ಕಂಪನಿಗಳು ಇತ್ಯಾಾದಿಗಳನ್ನು ಪರಿಗಣಿಸಿ ಈ ಚಿಂತನೆಗೆ ಮರುಜೀವ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಔಷಧ ವಿಜ್ಞಾನ, ಬಿ.ಟಿ ಮತ್ತು ಆರೋಗ್ಯ ಸೇವೆಗಳಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಅದರಲ್ಲೂ ಬೆಂಗಳೂರೊಂದರಲ್ಲೇ 400ಕ್ಕೂ ಹೆಚ್ಚು ಬಿ.ಟಿ. ಕಂಪನಿಗಳಿವೆ. ಜೊತೆಗೆ ಇಲ್ಲಿ ಭಾರತೀಯ ವಿಜ್ಞಾನ ಸಂಸ್ಥೆೆ, ರಾಷ್ಟ್ರೀಯ ಜೀವ ವಿಜ್ಞಾನಗಳ ಕೇಂದ್ರ (ಎನ್.ಸಿ.ಬಿ.ಎಸ್), ಬಯೋಇನ್ಾರ್ಮ್ಯಾಾಟಿಕ್ಸ್ ಮತ್ತು ಅಪ್ಲೈಡ್ ಬಯೋಟೆಕ್ನಾಾಲಜಿ (ಐಬಿಎಬಿ) ಮುಂತಾದ ಪ್ರತಿಷ್ಠಿಿತ ಸಂಸ್ಥೆೆಗಳಿವೆ. ರಾಜ್ಯ ಸರಕಾರದ ಬಯೋ-ಇನ್ನೋೋವೇಶನ್ ಸೆಂಟರ್ ಮತ್ತು ರಚನಾತ್ಮಕ ಬಿ.ಟಿ. ನೀತಿಯ ಮೂಲಕ ಈ ಕ್ಷೇತ್ರದ ನವೋದ್ಯಮಗಳಿಗೆ ಬೆಂಬಲ ಕೊಡಲಾಗುತ್ತಿಿದೆ ಎಂದು ಅವರು ವಿವರಿಸಿದ್ದಾರೆ.
ದೇಶದಲ್ಲಿರುವ ಬಿ.ಟಿ. ಕಂಪನಿಗಳ ಪೈಕಿ ಶೇ.60ರಷ್ಟು ರಾಜ್ಯದಲ್ಲೇ ಇವೆ. ಭಾರತವು ಮಾಡುತ್ತಿಿರುವ ಒಟ್ಟು ಔಷಧಗಳ ರಫ್ತಿಿನಲ್ಲಿ ರಾಜ್ಯದ ಪಾಲು ಶೇಕಡ 12ರಷ್ಟಿಿದೆ. ಅಲ್ಲದೆ ಕ್ಲಿಿನಿಕಲ್ ಸಂಶೋಧನೆ, ವೈದ್ಯಕೀಯ ಸಾಧನ ಸಲಕರಣೆಗಳ ತಯಾರಿಕೆ ಮತ್ತು ಎಪಿಐ ಉತ್ಪಾಾದನೆಯ ಕಾರ್ಯಜಾಲ ನಮ್ಮಲ್ಲಿದೆ. ಇವೆಲ್ಲವುಗಳನ್ನು ಪರಿಗಣಿಸಿ ರಾಜ್ಯಕ್ಕೆೆ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆೆಯನ್ನು ಮಂಜೂರು ಮಾಡಬೇಕು ಎಂದು ಪಾಟೀಲ ತಮ್ಮ ಪತ್ರದಲ್ಲಿ ಗಮನ ಸೆಳೆದಿದ್ದಾರೆ.

