ಸುದ್ದಿಮೂಲ ವಾರ್ತೆ ಬೀದರ, ಜ.13:
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜ.26ರ ಗಣರಾಜ್ಯೋೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.26 ರಂದು ಗಣರಾಜ್ಯೋೋತ್ಸವ ನಿಮಿತ್ಯ ಜನವರಿ.25 ಮತ್ತು 26 ರಂದು 2 ದಿವಸ ಸಂಘ-ಸಂಸ್ಥೆೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು. ಜನವರಿ.26 ರಂದು ಬೆಳಿಗ್ಗೆೆ 8 ಗಂಟೆಗೆ ಸರ್ಕಾರಿ-ಅರೆ ಸರ್ಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸಂಸ್ಥೆೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾಾರ್ಥಿಗಳೊಂದಿಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆೆ 8:45 ಗಂಟೆಯೊಳಗೆ ಹಾಜರಾಗಬೇಕು. ಬೆಳಿಗ್ಗೆೆ 9 ಗಂಟೆಗೆ ಬೀದರ ನಗರದ ನೇಹರು ಕ್ರೀೆಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು.
ಗಣರಾಜ್ಯೋೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಸಂಜೆ 5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಿ ಕಾರ್ಯಕ್ರಮ ಹಮ್ಮಿಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಬೀದರ ಸಹಾಯಕ ಆಯುಕ್ತ ಮೊಹಮ್ಮದ ಶಕೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಾಧಿಕಾರಿ ಚಂದ್ರಕಾಂತ ಪೂಜಾರ, ಸಂಘ-ಸಂಸ್ಥೆೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿಿತರಿದ್ದರು.
ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ – ಡಿ.ಸಿ

