ಸುದ್ದಿಮೂಲ ವಾರ್ತೆ ಬೆಂಗಳೂರು, ಜ.14:
ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿಿ ಹಾಗೂ ಬೆಂಗಳೂರು ನಗರಾಭಿವೃದ್ಧಿಿ ಸಚಿವ ಡಿ.ಕೆ.ಶಿವಕುರ್ಮಾ ಹೇಳಿದರು.
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಲಪುಷ್ಪ ಪ್ರದರ್ಶನ ಉದ್ಘಾಾಟಿಸಿ ಮಾತನಾಡಿದರು.
ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಬೆಂಗಳೂರು ಉದ್ಯಾಾನ ನಗರಿ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾಾನಗಳ ನಿರ್ಮಾಣಕ್ಕೆೆ ಜಿಬಿಎ ಹಾಗೂ ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್ ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿಿತಿ ನೋಡಿ, ಜನರ ಅಭಿಪ್ರಾಾಯ ಪಡೆದು ಅನೇಕ ಅಭಿವೃದ್ಧಿಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರ್ತಾಗುತ್ತಿಿದೆ. ಅಂತಾರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಇಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ 219ನೇ ಲಪುಷ್ಟ ಪ್ರದರ್ಶನ ಉದ್ಘಾಾಟಿಸಲಾಗಿದೆ. ಇದು ಬಹಳ ಐತಿಹಾಸಿಕ ಉದ್ಯಾಾನವನವಾಗಿದ್ದು, ಕರ್ನಾಟಕ ರಾಜ್ಯದ ಆಸ್ತಿಿಯಾಗಿದೆ. ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋೋತ್ಸವ ಹಿನ್ನೆೆಲೆಯಲ್ಲಿ ಈ ಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿಿದೆ. ಈ ಬಾರಿ ಪೂರ್ಣಚಂದ್ರ ತೇಜಸ್ವಿಿ ಅವರ ಸಿದ್ಧಾಾಂತ ಮೌಲ್ಯಗಳ ಪ್ರತಿಬಿಂಬವನ್ನು ಪುಷ್ಪಪ್ರದರ್ಶನದಲ್ಲಿ ರೂಪಿಸಲಾಗಿದೆ ಎಂದು ತಿಳಿಸಿದರು.
ಮೆಟ್ರೋೋ, ಸುರಂಗ ಮಾರ್ಗದಿಂದ ತೊಂದರೆ ಇಲ್ಲ:
ಈ ಭಾಗದಲ್ಲಿ ಮೆಟ್ರೋೋ ಹಾಗೂ ಸುರಂಗದಿಂದ ಲಾಲ್ಬಾಗ್ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿಿನ ಆಸಕ್ತಿಿ ನನಗಿದೆ. ನಾಗರೀಕರ ಸೌಲಭ್ಯಕ್ಕೆೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆಂಗಳೂರು ನಗರದ ಜನಸಂಖ್ಯೆೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆೆ ಅಗತ್ಯ ಕ್ರಮವನ್ನು ನಮ್ಮ ಸರ್ಕಾರ ಕೈಗೊಳ್ಳುತ್ತಿಿದೆ ಎಂದು ಭರವಸೆ ನೀಡಿದರು.
ಬೆಂಗಳೂರಿನ ನಾಗರೀಕರು, ಶಾಲಾ ಮಕ್ಕಳು ವಿದ್ಯಾಾರ್ಥಿಗಳು 10 ದಿನಗಳ ಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಇದಕ್ಕೆೆ ಹೆಚ್ಚಿಿನ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು.
ಈ ಉತ್ತಮ ಕೆಲಸ ಮಾಡಿಕೊಂಡು ಬಂದಿರುವ ಸ್ಥಳೀಯ ಶಾಸಕರು, ಸಚಿವ ರಾಮಲಿಂಗಾರೆಡ್ಡಿಿ, ಯುವರಾಜ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಬಸವಣ್ಣರ ಹೆಸರಿನಲ್ಲಿ ಬೃಹತ್ ಉದ್ಯಾಾನ: ಡಿಸಿಎಂ ಡಿಕೆಶಿ

