ಸುದ್ದಿಮೂಲ ವಾರ್ತೆ ಮಾನ್ವಿ, ಜ.21:
ಅಬಕಾರಿ ಇಲಾಖೆಯಲ್ಲಿ ನಡೆದಿದೆಯೆನ್ನಲಾದ ಬಾರ್ ಲೈಸ್ಸ್ ನೀಡಿಕೆಯಲ್ಲಿ ಲಂಚಕ್ಕೆೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಸಚಿವ ಆರ್.ಬಿ. ತಿಮ್ಮಾಾಪುರ ಇವರ ಪಾತ್ರ ಕಿಂಚಿತ್ತೂ ಇಲ್ಲ. ಆದರೂ ವಿರೋಧ ಪಕ್ಷದ ಬಿಜೆಪಿ ನಾಯಕರು ವೃಥಾ ಸಚಿವರ ವಿರುದ್ದ ಆರೋಪ ಮಾಡುತ್ತಿಿದ್ದಾರೆ ಎಂದು ಕಾಂಗ್ರೆೆಸ್ ಪಕ್ಷದ ಹಿರಿಯ ದಲಿತ ಮುಖಂಡ ಎ.ಬಾಲಸ್ವಾಾಮಿ ಕೊಡ್ಲಿಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಿಕಾ ಹೇಳಿಕೆ ನೀಡಿರುವ ಅವರು ಸಚಿವ ತಿಮ್ಮಾಾಪುರ ಅವರು ದಕ್ಷತೆ, ಪ್ರಾಾಮಾಣಿಕತೆಯಿಂದ ಅಬಕಾರಿ ಇಲಾಖೆಯನ್ನು ಮುನ್ನಡೆಸಿಕೊಂಡು ಬರುತ್ತಿಿದ್ದು, ಆದರೆ ಅವರ ಏಳಿಗೆ ಸಹಿಸದೇ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ. ತಿಮ್ಮಾಾಪುರ ಅವರೊಬ್ಬ ದಲಿತರಾಗಿರುವುದರಿಂದ ಅವರನ್ನು ಲಂಚ ಪ್ರಕರಣದಲ್ಲಿ ಸಿಲುಕಿಸಲು ಕುತಂತ್ರ ಮಾಡಿದ್ದಾರೆ ಎಂದು ಅವರು ಆಕ್ರೋೋಶ ವ್ಯಕ್ತಪಡಿಸಿದ್ದಾರೆ.
ಸಚಿವರು ಲಂಚಕ್ಕೆೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಅಧಿಕಾರಿಯ ಪಾತ್ರವಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಾನು ಯಾವುದೇ ತಪ್ಪೆೆಸಗಿಲ್ಲ. ಆ ಬಗ್ಗೆೆ ಯಾವುದೇ ಸಾಕ್ಷ್ಯಾಾಧಾರಗಳಿಲ್ಲ. ಮಿಗಿಲಾಗಿ ಉಪ್ಪುು ತಿಂದವರು ನೀರು ಕುಡಿಯಲೇಬೇಕು ಎಂದು ಸ್ವತಃ ಸಚಿವ ತಿಮ್ಮಾಾಪುರ ಅವರೇ ಹೇಳಿದ್ದಾರೆ. ಆದರೂ ಬಿಜೆಪಿಯವರು ಈ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಸಚಿವ ತಿಮ್ಮಾಾಪುರ ಹಾಗೂ ಸರಕಾರ ಯಾವುದೇ ಕಾರಣಕ್ಕೂ ವಿರೋಧ ಪಕ್ಷದ ಷಡ್ಯಂತ್ರಕ್ಕೆೆ ಮಹತ್ವ ನೀಡಬಾರದು. ಇಡೀ ದಲಿತ ಸಮುದಾಯ ಅದರಲ್ಲೂ ಮಾದಿಗೆ ಸಮಾಜ ಸಚಿವರ ಜೊತೆಗಿದೆ. ಒಂದು ವೇಳೆ ವಿರೋಧ ಪಕ್ಷದವರು ಸಚಿವರ ವಿರುದ್ಧ ಕುತಂತ್ರ ಮುಂದುವರಿಸಿದರೆ ಇಡೀ ಸಮಾಜವೇ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಬಾಲಸ್ವಾಾಮಿ ಕೊಡ್ಲಿಿ ಎಚ್ಚರಿಕೆ ನೀಡಿದ್ದಾರೆ.
ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧದ ಆರೋಪಕ್ಕೆ ಬಾಲಸ್ವಾಮಿ ಕೊಡ್ಲಿ ಆಕ್ರೋಶ

