ಸುದ್ದಿಮೂಲ ವಾರ್ತೆ ರಾಯಚೂರು, ಜ.27:
ಸವಿತಾ ಮಹರ್ಷಿಗಳು ತಿಳಿಸಿದ ಮಹತ್ವದ ತತ್ವಾಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ರಾಯಚೂರಿನ ಹಿರಿಯ ಸಾಹಿತಿ ವೀರ ಹನುಮಾನ್ ಅವರು ಹೇಳಿದರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಾಸ ನೀಡಿದರು.
ಸವಿತಾ ಮಹರ್ಷಿಗಳು ಸಾಧಕ ವ್ಯಕ್ತಿಿಯಾಗಿದ್ದು, ಸವಿತಾ ಸಮಾಜದ ಮೂಲ ಪುರುಷರಾಗಿದ್ದಾರೆ. ಲೋಕದ ಜ್ಞಾನವನ್ನು ಹೊಂದಿದ್ದ ಮತ್ತು ಸಮಾಜದ ಅಂಕುಡೊಅಕುಗಳನ್ನು ತಿದ್ದುವ ನಿಟ್ಟಿಿನಲ್ಲಿ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಮನುಕುಲದ ಉದ್ದಾಾರಕ್ಕಾಾಗಿ ಜನ್ಮವೆತ್ತಿಿ, ಮಾನವಕುಲಕ್ಕೆೆ ಸಮ ಸಮಾಜದ ಸಂದೇಶವನ್ನು ಸಾರಿ, ಮನುಷ್ಯನ ದೈಹಿಕ ಮತ್ತು ಮಾನಸಿಕ ವ್ಯಕ್ತಿಿತ್ವವನ್ನು ರೂಪಿಸುವ ನಿಟ್ಟಿಿನಲ್ಲಿ ಸಾಕಷ್ಟು ವಿಚಾರಗಳನ್ನು ನೀಡಿದ್ದಾರೆ. ಅಂತಹ ಮಹಾನ್ ಮಹರ್ಷಿಗಳ ವಿಚಾರಗಳನ್ನು ನಾವು ಅರಿಯಬೇಕು ಎಂದು ತಿಳಿಸಿದರು.
ಸವಿತಾ ಮಹರ್ಷಿ ಭಾವಚಿತ್ರ ಮೆರವಣಿಗೆ : ಕಾರ್ಯಕ್ರಮಕ್ಕೂ ಮೊದಲು ನಗರದ ಗೋವಿಂದರಾವ್ ಪೆಟ್ರೋೋಲ್ ಬಂಕ್ ಹತ್ತಿಿರ ನಡೆದ ಸವಿತಾ ಮಹರ್ಷಿ ಭಾವಚಿತ್ರದ ಮೆರವಣಿಗೆಗೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ತಂಡಗಳೊಅದಿಗೆ ಸಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿಿ ರಂಗಮಅದಿರಕ್ಕೆೆ ಬಂದು ಸೇರಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀರ್ಲ್ದಾಾ ಪರಶುರಾಮ, ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ನರಸಿಂಹ ರೆಡ್ಡಿಿ, ಸಮಾಜದ ಮುಖಂಡರಾದ ಗೋವಿಂದ, ನಾಗರಾಜ್, ನರಸರೆಡ್ಡಿಿ, ವೆಂಕಟೇಶ, ರಾಘವೇಂದ್ರ ಇಟಗಿ, ನಾಗರಾಜ್, ಸುಮಾ ಅಶೋಕ ಗಸ್ತಿಿ, ಗಾಯತ್ರಿಿ, ಜಿ.ಆನಂದ, ಬಸವರಾಜ, ಸುಶೀಲಾ, ಭೀಮೇಶ್ ಸೇರಿದಂತೆ ಇತರರು ಇದ್ದರು.
ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಾಹಿತಿ ವೀರ ಹನುಮಾನ್ ಸಲಹೆ

