ಸುದ್ದಿಮೂಲ ವಾರ್ತೆ ಭಾಲ್ಕಿ, ೆ.12:
ತಾಲ್ಲೂಕಿನ ಅಟ್ಟರಗಾ ಗ್ರಾಾಮದಲ್ಲಿ ಯುವಕನ್ನೊೊಬ್ಬ ಶ್ರೀ ರಾಮ ಹಾಗೂ ಶ್ರೀಕೃಷ್ಣರ ಬಗ್ಗೆೆ ಅವಹೇಳನಕಾರಿಯಾಗಿ ಮಾತನಾಡಿರುವುದಾಗಿ ಆರೋಪಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಾಪಕವಾಗಿ ಹರಿದಾಡುತ್ತಿಿದ್ದು, ಇದಕ್ಕೆೆ ಭಾರಿ ಆಕ್ರೋೋಶ ವ್ಯಕ್ತವಾಗಿದೆ.
ಯುವಕನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಾಯಿಸಿ ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ತಡರಾತ್ರಿಿ ಮೇಹಕರ್ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಆರೋಪಿಯ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.
ಅಟ್ಟರಗಾ ಗ್ರಾಾಮದ ಆರೋಪಿ:
ದೆಹಲಿಗೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಸ್ನೇಹಿತರೊಂದಿಗೆ ಮರಾಠಿ ಭಾಷೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಹೊಗಳುತ್ತಲೇ ಶ್ರೀರಾಮಚಂದ್ರ ಹಾಗೂ ಶ್ರೀಕೃಷ್ಣರನ್ನು ನಿಂದಿಸಿ ಅವಹೇಳನ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿರುವ ಹಿನ್ನೆೆಲೆ ಪ್ರತಿಭಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರತಿಭಟನಾಕಾರರು ಮೇಹಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಾಯಿಸಿದರು. ಪೊಲೀಸರು ದೂರು ದಾಖಲಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟಿಿದ್ದಾರೆ ಎನ್ನಲಾಗಿದೆ.
ಇಬ್ಬರ ವಿರುದ್ಧ ದೂರು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶ್ರೀರಾಮ-ಕೃಷ್ಣರ ವಿರುದ್ಧ ಅವಹೇಳನ ವಿಡಿಯೋ ವೈರಲ್ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮೇಹಕರ ಠಾಣೆ ಎದುರು ಪ್ರತಿಭಟನೆ

