ಸುದ್ದಿಮೂಲ ವಾರ್ತೆ ರಾಯಚೂರು, ೆ.26:
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಬಿಳಿಜೋಳ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಖರೀದಿ ಸಮಯದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಿಕೊಳ್ಳಲಾಗಿದ್ದ ಜೋಳ ಖರೀದಿ ಕುರಿತು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಡಳಿತದಿಂದ ನಿಗದಿಪಡಿಸಲಾಗಿರುವ ಮಾನದಂಡಗಳನ್ವಯ ಈಗಾಗಲೇ ನೋಂದಣಿಯಾಗಿರುವ ಅಥವಾ ನೋಂದಣಿಯಾಗುವ ರೈತರಿಂದ ಬಿಳಿಜೋಳ ರೈತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವತಿಯಿಂದ ಖರೀದಿ ಪ್ರಕ್ರಿಿಯೆ ಪ್ರಾಾರಂಭಿಸಬೇಕೆಅದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಗೆ ಅವಶ್ಯವಿರುವ ಗೋಣಿ ಚೀಲಗಳ ಸಿದ್ದತೆ ಮಾಡಿಕೊಳ್ಳಬೇಕು. ಖರೀದಿ ಕೇಂದ್ರದಲ್ಲಿ ಬಳಸುವ ಡಿಜಿಟಲ್ ತೂಕ ಮಾಪನ ಯಂತ್ರಗಳನ್ನು ಕಡ್ಡಾಾಯವಾಗಿ ಕಾನೂನು ಮಾಪಂಶಾಸ್ತ ಇಲಾಖೆಯಿಂದ ಸ್ಟ್ಯಾಾಂಪಿಂಗ್ ಮಾಡಿಸಿಕೊಳ್ಳುವಂತೆ ಖರೀದಿ ಕೇಂದ್ರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಆಯಾ ಖರೀದಿ ಕೇಂದ್ರ ವ್ಯಾಾಪ್ತಿಿಯ ಕಾನೂನು ಮಾಪನ ಶಾಸ ಇಲಾಖೆಯ ನಿರೀಕ್ಷಕರುಗಳಿಗೆ ಸಂಬಂಧಪಟ್ಟ ಖರೀದಿ ಕೇಂದ್ರದಲ್ಲಿ ಬಳಸುತ್ತಿಿರುವ ಡಿಜಿಟಲ್ ತೂಕ ಮಾಪನ ಯಂತ್ರಗಳನ್ನು ಸ್ಟ್ಯಾಾಟಿಂಗ್ ಮಾಡಿಸಿರುವ ಬಗ್ಗೆೆ ಪರಿಶೀಲಿಸುವಂತೆ ಕಾನೂನು ಮಾಪನ ಶಾಸ್ತ ಇಲಾಖೆಯ ಸಹಾಯಕ ನಿಯಂತ್ರಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಹಿಂದಿನ ಸಾಲಿನಲ್ಲಿ ಸಮಯಕ್ಕೆೆ ಸರಿಯಾಗಿ ಲಾರಿಗಳು ಖರೀದಿ ಕೇಂದ್ರಗಳಿಗೆ ಬಾರದೇ ಇರುವುದರಿಂದ ಖರೀದಿ ಪ್ರಕ್ರಿಿಯೆ ಮಂದಗತಿಯಲ್ಲಿ ಸಾಗಿದ್ದು, ಈ ಸಾಲಿನಲ್ಲಿ ಆ ರೀತಿ ಆಗದಂತೆ ನೋಡಿಕೊಳ್ಳಬೇಕು. ಕಾರ್ಯಾದೇಶದಲ್ಲಿ ನೀಡಲಾಗಿರುವ 133 ಲಾರಿಗಳಿಗೆ ಜಿಪಿಎಸ್ ಅಳವಡಿಸಿಕೊಂಡು ಈ ಸಾಲಿನಲ್ಲಿ ನಿಯಮಾನುಸಾರ ಅಗತ್ಯಕ್ಕೆೆ ತಕ್ಕಂತೆ ಲಾರಿಗಳ ವ್ಯವಸ್ಥೆೆ ಮಾಡಿಕೊಂಡು ಎಲ್ಲಾ ಖರೀದಿ ಕೇಂದ್ರಗಳಿಗೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ವೇಳೆ ಕೆಎ್ಸಿಎಸ್ಸಿಿ ಜಿಲ್ಲಾ ವ್ಯವಸ್ಥಾಾಪಕ ಪ್ರಕಾಶ್ ಅವರು ಮಾತನಾಡಿ, ಎ್ಸಿಐ ತನಿಖಾ ತಂಡವು ನೀಡಿರುವ ವರದಿಯಾನುಸಾರ ಹಿಂದಿನ ಸಾಲಿನಲ್ಲಿ ಹಂಚಿಕೆಯಾಗಿ ಬಳಕೆಗೆ ಯೋಗ್ಯವಿರುವ 5,53,545 ಗೋಣಿ ಚೀಲಗಳು ವಿವಿಧ ಖರೀದಿ ಕೇಂದ್ರಗಳಲ್ಲಿ ಲಭ್ಯವಿರುವುದಾಗಿ ಮತ್ತು 2.50 ಲಕ್ಷ ನೂತನ ಗೋಣಿ ಚೀಲಗಳು ಜಿಲ್ಲೆಗೆ ಹಂಚಿಕೆಯಾಗಿದ್ದು, ಅತೀ ಶೀಘ್ರದಲ್ಲಿಯೇ ಕೇಂದ್ರಗಳಿಗೆ ತಲುಪಿಸುವುದಾಗಿ ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಲಿಂಗಸುಗೂರು ಸಹಾಯಕ ಆಯುಕ್ತ ಬಸವಣ್ಣೆೆಪ್ಪ ಕಲಶೆಟ್ಟಿಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ನಜೀರ್ ಅಹಮದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವಾಣ್, ಸಹಕಾರ ಸಂಘಗಳ ಉಪ ನಿಬಂಧಕರು, ಜಿಲ್ಲೆಯ ದೇವದುರ್ಗ, ಲಿಂಗಸುಗೂರು, ಮಾನವಿ, ರಾಯಚೂರು, ಸಿಂಧನೂರು, ಮಸ್ಕಿಿ, ಸಿರವಾರ ತಾಲೂಕಿನ ತಹಶೀಲ್ದಾಾರರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಾಪಕರು ಸೇರಿದಂತೆ ಇತರರು ಇದ್ದರು.
ಜಿಲ್ಲಾ ಟಾಸ್ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’

