ಸುದ್ದಿಮೂಲ ವಾರ್ತೆ ನವದೆಹಲಿ, ನ.20:
ರಾಜ್ಯಗಳ ವಿಧಾನಸಭೆ ಒಪ್ಪಿಿಗೆ ನೀಡಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಸಮಯ ನಿಗದಿಪಡಿಸಲು ಆಗುವುದಿಲ್ಲ ಎಂದು ಸುಪ್ರೀೀಂ ಕೋರ್ಟ್ನ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.
ಅಲ್ಲದೆ ಮಸೂದೆಗಳಿಗೆ ಪರಿಗಣಿತ ಒಪ್ಪಿಿಗೆ ನೀಡುವುದನ್ನೂ ಕೋರ್ಟ್ ನಿಷೇಧಿಸಿದೆ.
ಈ ಬಗ್ಗೆೆ ಸರ್ವಾನುಮತದ ತೀರ್ಪು ನೀಡಿರುವ ಸುಪ್ರೀೀಂ ಕೋರ್ಟ ಐವರು ನ್ಯಾಾಯಮೂರ್ತಿಗಳ ಸಾಂವಿಧಾನಿಕ ಪೀಠ, ಸಂವಿಧಾನದ 200 ನೇ ವಿಧಿಯಡಿ ನೀಡಿರುವ ಅಧಿಕಾರವನ್ನು ಮೀರಿ ರಾಜ್ಯಪಾಲರು ವರ್ತಿಸುವಂತಿಲ್ಲ ಎಂದೂ ಹೇಳಿದೆ. ರಾಜ್ಯ ವಿಧಾನಸಭೆಗಳು ಒಪ್ಪಿಿಗೆ ನೀಡಿರುವ ಮಸೂದೆಗಳ ಮೇಲೆ ಕುಳಿತುಕೊಳ್ಳುವ ಮುಕ್ತ ಅಧಿಕಾರ ರಾಜ್ಯಪಾಲರಿಗೆ ಇಲ್ಲ ಎಂದು ಮುಖ್ಯ ನ್ಯಾಾಯಮೂರ್ತಿ ಬಿ.ಆರ್.ಗವಾಯಿ ಅವರ ನೇತೃತ್ವದ ಪೀಠ ಅಭಿಪ್ರಾಾಯಪಟ್ಟಿಿತು.
ನ್ಯಾಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಂನಾಥ್, ಪಿ.ಎಸ್.ನರಸಿಂಹ ಹಾಗೂ ಎ.ಎಸ್. ಚಂದೂರ್ಕರರ್ ಸಾಂವಿಧಾನಿಕ ಪೀಠದಲ್ಲಿದ್ದರು.
ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಯಾವಕಾಶ ನಿಗದಿ ಮಾಡುವುದು ಸಂವಿಧಾನದಲ್ಲಿ ನೀಡಲಾಗಿರುವ ಹೊಂದಿಕೊಳ್ಳುವ ಗುಣಕ್ಕೆೆ ವಿರುದ್ಧ ಎಂದು ಸಂವಿಧಾನಿಕ ಪೀಠ ಅಭಿಪ್ರಾಾಯಪಟ್ಟಿಿದೆ.
ತೀರ್ಪಿನ ಒಂದು ಭಾಗವನ್ನು ಓದಿದ ಸಿಜೆಐ 200 ನೇ ವಿಧಿಯಡಿ ರಾಜ್ಯಪಾಲರಿಗೆ ಮೂರು ಅವಕಾಶಗಳಿವೆ. ಮಸೂದೆಗೆ ಸಹಿ ಹಾಕುವುದು. ಅದನ್ನು ರಾಷ್ಟ್ರಪತಿಗೆ ಶಿಾರಸು ಮಾಡುವುದು ಅಥವಾ ಒಪ್ಪಿಿಗೆಯನ್ನು ತಡೆಹಿಡಿದು ಉಲ್ಲೇಖಗಳೊಂದಿಗೆ ವಿಧಾನಸಭೆಗೆ ಮರಳಿಸುವುದು.
ಈ ಮೂರು ಸಾಂವಿಧಾನಿಕ ಅವಕಾಶಗಳನ್ನು ಬಳಸಿಕೊಳ್ಳುವ ವಿವೇಚನೆ ರಾಜ್ಯಪಾಲರಿಗೆ ಬಿಟ್ಟಿಿದ್ದು. 200ನೇ ವಿಧಿಯಡಿ ಯಾವುದೇ ಅಧಿಕಾರ ಚಲಾಯಿಸುವಾಗ ಮಂತ್ರಿಿ ಪರಿಷತ್ತಿಿನ ಅಭಿಪ್ರಾಾಯವೂ ತೆಗೆದುಕೊಳ್ಳಬೇಕಾಗಿಲ್ಲ ಎಂದು ಕೋರ್ಟ್ ಹೇಳಿದೆ.
ಸಂವಿಧಾನ ರಾಜ್ಯಪಾಲರ ಕರ್ತವ್ಯ ನಿರ್ವಹಿಸಲು 200 ನೇ ವಿಧಿಯಡಿ ನೀಡಿರುವ ಅಧಿಕಾರ ನಿರ್ವಹಣೆಯನ್ನು ನ್ಯಾಾಯಾಂಗ ಪ್ರಕ್ರಿಿಯೆಗೆ ಒಳಪಡುವುದಿಲ್ಲ. ಅವರ ನಿರ್ಧಾರಕ್ಕೆೆ ನ್ಯಾಾಯಾಲಯ ಮಧ್ಯ ಪ್ರವೇಶಿಸಲೂ ಅಸಾಧ್ಯ ಎಂದು ಹೇಳಿದೆ.
ಯಾವುದೇ ಸಮಯ ನಿಗದಿ ಮಾಡುವ ಹಾಗೂ ರಾಜ್ಯಪಾಲರು ಅಧಿಕಾರಗಳನ್ನು ಚಲಾಯಿಸುವ ರೀತಿಯ ಬಗ್ಗೆೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖ ಇಲ್ಲದಿರುವಾಗ, 200ನೇ ವಿಧಿಯಡಿ ಅಧಿಕಾರವನ್ನು ಚಲಾಯಿಸಲು ನ್ಯಾಾಯಾಂಗದ ಮೂಲಕ ಸಮಯ ನಿಗದಿ ಮಾಡುವುದು ಈ ಕೋರ್ಟ್ಗೆ ಸೂಕ್ತವಲ್ಲ ಎಂದು ಪೀಠ ಹೇಳಿದೆ.
ಬಾಕ್ಸ್
ಮಸೂದೆಗಳಿಗೆ ಒಪ್ಪಿಿಗೆ ನೀಡಲು ರಾಜ್ಯಪಾಲರು ವಿಳಂಬ ಮಾಡುತ್ತಿಿದ್ದಾರೆ ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಾಯಮೂರ್ತಿ ಜೆ.ಬಿ.ಪಾರ್ದಿವಾಲ ಅವರ ನೇತೃತ್ವದ ಪೀಠ, ರಾಜ್ಯಗಳ ವಿಧಾನಸಭೆ ಒಪ್ಪಿಿಗೆ ನೀಡಿದೆ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರ ಹಾಗೂ ರಾಷ್ಟ್ರಪತಿಗಳಿಗೆ ಮೂರು ತಿಂಗಳ ಗಡುವು ವಿಧಿಸಿತ್ತು.
ಸುಪ್ರೀೀಂ ಕೋರ್ಟ್ ಈ ತೀರ್ಪುನ ಬಗ್ಗೆೆ ರಾಷ್ಟ್ರಪತಿ ದ್ರೌೌಪದಿ ಮುರ್ಮು ಕೋರ್ಟ್ಗೆ 14 ಪ್ರಶ್ನೆೆಗಳನ್ನು ಕೇಳಿದ್ದರು. ಈ ಪ್ರಶ್ನೆೆಗಳ ಬಗ್ಗೆೆ ಚರ್ಚಿಸಲು ಐವರು ಸದಸ್ಯರ ಪೀಠ ಒಪ್ಪಿಿಕೊಂಡಿತ್ತು.

