ಸುದ್ದಿಮೂಲ ವಾರ್ತೆ ಕಲಬುರಗಿ, ಸೆ.30:
ಕೃಷಿ ಸಚಿವ ಎನ್.ಚೆಲುವರಾಯಸ್ವಾಾಮಿ ಅವರು ಕಲಬುರಗಿ ತಾಲೂಕಿನ ಸಾವಳಗಿ ಕ್ರಾಾಸ್ ಹಾಗೂ ಆಳಂದ ತಾಲೂಕಿನ ಕಡಗಂಚಿಯಲ್ಲಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು.
ಸಾವಳಗಿ ಕ್ರಾಾಸ್ ಬಳಿ ನಾಲ್ಕು ಎಕರೆಯಲ್ಲಿ ಸೋಮಶೇಖರ ಹಣಮಂತರಾವ ಅವರು ಬೆಳೆದ ತೊಗರಿ ಬೆಳೆ ಹಾನಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎನ್.ಚೆಲುವರಾಯಸ್ವಾಾಮಿ ಅವರು, ಕಳೆದ ಬಾರಿ ಸಹ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಿಯಿಂದ ಬೆಳೆ ಹಾನಿಯಾದ ಕಾರಣಕ್ಕೆೆ ಸುಮಾರು 650 ಕೋಟಿ ರೂ. ಪರಿಹಾರ ಘೋಷಿಸಲಾಗಿತ್ತು. ಈ ವರ್ಷ ಸಹ ಮತ್ತೆೆ ಮಳೆಯಿಂದ ಬೆಳೆ ಹಾನಿಯಾಗಿದ್ದು, ಬೆಳೆ ವಿಮೆ ಪರಿಹಾರದ ಜೊತೆಗೆ ಸರ್ಕಾರದಿಂದ ಪರಿಹಾರ ಬಿಡುಗಡೆ ಕುರಿತು ಸಿ.ಎಂ.ಘೋಷಣೆ ಮಾಡಲಿದ್ದಾರೆ ಎಂದರು.
ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ವಿಜಯಪುರ ಜಿಲ್ಲೆಯಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ. ಇದಲ್ಲದೆ ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯಲ್ಲೂ ಸಹ ಬೆಳೆ ಹಾನಿಯಾಗಿದ್ದು, ಮುಖ್ಯಮಂತ್ರಿಿ ಇಂದು ವೈಮಾನಿಕ ಸಮೀಕ್ಷೆ ನಡೆಸುತ್ತಿಿದ್ದಾರೆ. ಬಳಿಕ ತೀವ್ರ ಹಾನಿಗೊಳಗಾದ ನಾಲ್ಕು ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಬೆಳೆ ಹಾನಿ ಕುರಿತು ಸಭೆ ನಡೆಸಿ ಸೂಕ್ತ ಘೋಷಣೆ ಜೊತೆಗೆ ಎನ್.ಡಿ.ಆರ್.ಎ್ ನಲ್ಲಿಯೂ ಪರಿಹಾರಕ್ಕೆೆ ಕೇಂದ್ರ ಸರ್ಕಾರಕ್ಕೆೆ ಒತ್ತಾಾಯ ಮಾಡಲಾಗುತ್ತದೆ ಎಂದು ಸಚಿವ ಎನ್. ಚೆಲುವರಾಯಸ್ವಾಾಮಿ ತಿಳಿಸಿದರು.
ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಾಮಪ್ಪ ಧಂಗಾಪೂರ ಅವರು ರೈತರ ವಿವಿಧ ಬೇಡಿಕೆಯ ಕುರಿತು ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರ ಈಗಾಗಲೆ ಪಂಚ ಗ್ಯಾಾರಂಟಿ ಯೋಜನೆಗಳನ್ನು ಯಶಸ್ವಿಿಯಾಗಿ ಜಾರಿಗೊಳಿಸಿದ್ದು, ರೈತರ ಕಲ್ಯಾಾಣಕ್ಕಾಾಗಿ ಬೆಳೆ ಸಾಲ ಮನ್ನಾಾ ಮಾಡುವ ಆರನೇ ಗ್ಯಾಾರಂಟಿ ಘೋಷಿಸಬೇಕು ಎಂದು ಮನವಿ ಮಾಡಿದರು.
ಬಳಿಕ ಸಚಿವರು ಕಡಗಂಚಿಯಲ್ಲಿ ರೈತ ಶಿವರಾಜ ಕುಡಕಿ ನಾಲ್ಕು ಎಕರೆಯಲ್ಲಿ ಬೆಳೆದ ತೊಗರಿ ಬೆಳೆ ಸಂಪೂರ್ಣ ಹಾನಿಯಾಗಿ ಹೊಲದಲ್ಲಿ ನೀರು ನಿಂತಿರುವುದನ್ನು ವೀಕ್ಷಿಸಿದರು.
ಸರಡಗಿ (ಬಿ)ಯಲ್ಲಿಯೂ ವೀಕ್ಷಣೆ:
ಸರಡಗಿ ಬ್ಯಾಾರೇಜ್ ಹಿನ್ನೀರಿನಿಂದ ತೀವ್ರ ಹೊಡೆತಕ್ಕೆೆ ಒಳಗಾದ ಸರಡಗಿ ಬಿ. ಗ್ರಾಾಮದ ಸರ್ವೇ ನಂ.139/7 ಮತ್ತು 139/9 ರಲ್ಲಿ ಪ್ರಜ್ವಲ ರವೀಂದ್ರ ಅವರ 3.26 ಎಕರೆ, ಸರ್ವೆ ನಂ.139/6 ರಲ್ಲಿ ಅಬ್ಬಾಾಸಲಿ ಲಾಲ್ ಅಹ್ಮದ ಅವರು ನಾಲ್ಕು ಎಕರೆ ಹಾಗೂ ಸರ್ವೆ ನಂ. 139/5 ರಲ್ಲಿ ಯೂನುಸ್ ಹಸನ್ ಸಾಬ್ ಅವರು 2 ಎಕರೆಯಲ್ಲಿ ಬೆಳೆದ ತೊಗರಿ, ಸರ್ವೆ ನಂ.140/5 ಮತ್ತು 140/2 ರಲ್ಲಿ ರೈತ ಮಹಿಳೆ ಮಹಾದೇವಿ ಸಾಯಬಣ್ಣ ಅವರಿಗೆ ಸೇರಿದ 3.37 ಎಕರೆಯಲ್ಲಿ ಬೆಳೆದ ಹತ್ತಿಿ ಬೆಳೆ ಹಾನಿಯನ್ನು ಸಚಿವ ಎನ್.ಚೆಲುವರಾಯಸ್ವಾಾಮಿ ಅವರು ವೀಕ್ಷಿಸಿದರು.
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕೃಷಿ ಉಪನಿರ್ದೇಶಕ ಸೋಮಶೇಖರ ಬಿರಾದರ, ಆಳಮದ ತಹಶೀಲ್ದಾಾರ ಅಣ್ಣಾಾರಾಯ ಪಾಟಿಲ, ಕೃಷಿ ಸಹಾಯಕ ನಿರ್ದೇಶಕ ಡಾ.ಅರುಣ ಮೂಲಿಮನಿ ಮೊದಲಾದವರು ಇದ್ದರು.
ಬೆಳೆ ಹಾನಿ ಪರಿಶೀಲನೆ ನಡೆಸಿದ ಕೃಷಿ ಸಚಿವ
