ಸುದ್ದಿಮೂಲ ವಾರ್ತೆ ಬಳ್ಳಾಾರಿ, ನ.20:
ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯ, ಆರ್ಬಿಐ, ಎಸ್ಎಲ್ಬಿಸಿ ಮತ್ತು ಬಳ್ಳಾಾರಿ ಜಿಲ್ಲಾಾಡಳಿತ ನಿರ್ದೇಶನದಂತೆ ನಿಷ್ಕ್ರಿಿಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಿಯಗೊಳಿಸುವಿಕೆಗಾಗಿ ನವೆಂಬರ್ 21 ರ ಶುಕ್ರವಾರ ಮಧ್ಯಾಾಹ್ನ 12.30 ಗಂಟೆಗೆ ಹಳೆಯ ಜಿಲ್ಲಾಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ‘ನಿಮ್ಮ ಹಣ-ನಿಮ್ಮ ಹಕ್ಕು, ನಿಷ್ಕ್ರಿಿಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳ ಜಾಗೃತಿ ಶಿಬಿರ ನಡೆಯಲಿದೆ ಎಂದು ಲೀಡ್ ಬ್ಯಾಾಂಕ್ನ ಜಿಲ್ಲಾಾ ಮುಖ್ಯ ವ್ಯವಸ್ಥಾಾಪಕ ಗಿರೀಶ್ ವಿ.ಕುಲಕರ್ಣಿ ಅವರು ತಿಳಿಸಿದ್ದಾಾರೆ.
ಹಣಕಾಸು ಸೇವೆಗಳ ಇಲಾಖೆಯು ಅಕ್ಟೋೋಬರ್ 03 ರಿಂದ ಡಿಸೆಂಬರ್ 31 ರವರೆಗೆ ನಿಷ್ಕ್ರಿಿಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳು, ವಿಮಾ ಪಾಲಿಸಿ ಮೊತ್ತ, ಷೇರುಗಳನ್ನು ಇತ್ಯರ್ಥಪಡಿಸಲು ಅಭಿಯಾನ ಪ್ರಾಾರಂಭಿಸಿದೆ.
ದಾಖಲೆಗಳ ಪ್ರಕಾರ ಬಳ್ಳಾಾರಿ ಜಿಲ್ಲೆೆಯಲ್ಲಿ 2,73,484 ನಿಷ್ಕ್ರಿಿಯ ಖಾತೆಗಳಿದ್ದು, ಒಟ್ಟು 73.54 ಕೋಟಿ ರೂ. ಮೊತ್ತವಿದೆ. 10 ವರ್ಷಗಳಿಗೂ ಹೆಚ್ಚು ಕಾಲದಿಂದ ಬಾಕಿ ಇರುವ ನಿಷ್ಕ್ರಿಿಯ ಖಾತೆಗಳನ್ನು ಮುಚ್ಚುವ ಅಥವಾ ಕೆವೈಸಿ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕ್ರಿಿಯ ಖಾತೆಗಳನ್ನು ಮರು-ಸಕ್ರಿಿಯಗೊಳಿಸಿಕೊಳ್ಳಬೇಕು.
ಆನ್ಲೈನ್ ಠಿಠಿ://್ಠಜಞ.್ಟಚಿಜಿ.ಟ್ಟಜ.ಜ್ಞಿಿ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು ಅಥವಾ ಗ್ರಾಾಹಕರು ತಮ್ಮ ಹತ್ತಿಿರದ ಬ್ಯಾಾಂಕ್ ಶಾಖೆ, ಎಲ್ಐಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕ್ರಿಿಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಿಯಗೊಳಿಸುವಿಕೆಗಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಬಳ್ಳಾಾರಿಯ ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾಾರೆ.

