ಸುದ್ದಿಮೂಲ ವಾರ್ತೆ ಬೆಂಗಳೂರು, ನ.17:
ರಾಯಚೂರಿನಲ್ಲಿ ಏಮ್ಸ್ ಸ್ಥಾಾಪನೆಗೆ ಅನುಮೋದನೆ ನೀಡಬೇಕು, ಕಬ್ಬು ಉತ್ತಮ ಬೆಲೆ ನಿಗದಿ, ಪ್ರವಾಹ ಪರಿಹಾರಕ್ಕೆೆ 2100 ಕೋಟಿ ರೂ. ಒದಗಿಸುವುದು ಸೇರಿದಂತೆ ಐದು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಗೆ ಸಮಯ ನೀಡಿದ್ದ ಮೇರೆಗೆ ಇಂದು ನವದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರ ಕಚೇರಿಯಲ್ಲಿ ಭೇಟಿ ಮಾಡಿ ರಾಜ್ಯದ ಪ್ರಮುಖ ಬೇಡಿಕೆಗಳ ಬಗ್ಗೆೆ ಚರ್ಚೆ ನಡೆಸುವುದರ ಜೊತೆಗೆ, ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ನೀಡಿದರು.
ರಾಯಚೂರಿನಲ್ಲಿ ಏಮ್ಸ್:
ಕಲ್ಯಾಾಣ ಕರ್ನಾಟಕದ ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದ್ದು, ಆಕಾಂಕ್ಷಿ ಜಿಲ್ಲೆಯಾಗಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿಿನ ಸಂಖ್ಯೆೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆರೆಲ್ ವೈದ್ಯಕೀಯ ಕೇಂದ್ರದ ಅಗತ್ಯತೆ ಪೂರೈಸಲು ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಾಪನೆಗೆ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಕೋರಿದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಾಪನೆಗೆ ಅನುಮೋದನೆ ಕೋರಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಸಚಿವಾಲಯಕ್ಕೆೆ ವಿವರವಾದ ಯೋಜನಾ ವರದಿಯನ್ನು ಕರ್ನಾಟಕ ಸರ್ಕಾರವು ಈಗಾಗಲೇ ಸಲ್ಲಿಸಿದೆ.
ಅಲ್ಲದೆ, ಯೋಜನೆಗೆ ಅವಶ್ಯವಾದ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದ್ದು ಅಗತ್ಯದಷ್ಟು ಭೂಮಿಯೂ ಲಭ್ಯವಿದೆ. ಸಂಪರ್ಕ ವ್ಯವಸ್ಥೆೆ ಮತ್ತು ಸ್ಥಳೀಯ ಆಡಳಿತದ ಬೆಂಬಲ ಸೇರಿದಂತೆ ಏಮ್ಸ್ನಂತಹ ರಾಷ್ಟ್ರೀಯ ಮಟ್ಟದ ಸಂಸ್ಥೆೆಯನ್ನು ಜಿಲ್ಲೆಯಲ್ಲಿ ಸ್ಥಾಾಪಿಸಲು ಪೂರಕ ವ್ಯವಸ್ಥೆೆ ಕಲ್ಪಿಿಸಲಾಗಿದೆ. ಇದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ರಾಯಚೂರಿನಲ್ಲಿ ಏಮ್ಸ್ ಸ್ಥಾಾಪನೆಗೆ ಅನುಮೋದನೆ ಒದಗಿಸಬೇಕು.
ರಾಯಚೂರಿನಲ್ಲಿ ಏಮ್ಸ್ ಸ್ಥಾಾಪನೆಯು ಕೇವಲ ರಾಯಚೂರು, ಯಾದಗಿರಿ, ಬಳ್ಳಾಾರಿ, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಬೃಹತ್ ಜನಸಂಖ್ಯೆೆಗೆ ಮಾತ್ರವಲ್ಲದೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಿಗೆ ವೇಗ ನೀಡುತ್ತದೆ, ಉದ್ಯೋೋಗ ಸೃಷ್ಟಿಿಸುತ್ತದೆ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆ ಹಾಗೂ ವೈದ್ಯಕೀಯ ಶಿಕ್ಷಣ ವಿಕೇಂದ್ರೀೀಕರಣಗೊಳಿಸಲು ಸಹಾಯ ಮಾಡುತ್ತದೆ. ಈ ನಿಟ್ಟಿಿನಲ್ಲಿ, ತಾವು ಈ ಕೋರಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವಿರಿ ಮತ್ತು ಕಲ್ಯಾಾಣ ಕರ್ನಾಟಕ ಪ್ರದೇಶದ ವೈದ್ಯಕೀಯ ಸೇವೆಯಲ್ಲಿ ಹೊಸ ಅಧ್ಯಾಾಯ ಆರಂಭಿಸುವಲ್ಲಿ ನೀವು ಪ್ರಮುಖ ಪಾತ್ರ ವಹಿಸುವಿರಿ ಎಂಬ ವಿಶ್ವಾಾಸ ನಮಗಿದೆ ಎಂದು ಸಿಎಂ ಪ್ರಧಾನಿಯವರಿಗೆ ಸಲ್ಲಿಸಿದ ಮನವಿಯಲ್ಲಿ ವಿಶ್ವಾಾಸ ವ್ಯಕ್ತಪಡಿಸಿದರು.
ನೀರಾವರಿ ಯೋಜನೆಗಳು :
ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರದಿಂದ ಬಾಕಿ ಇರುವ ತೀರುವಳಿಗಳನ್ನು ದೊರಕಿಸಲು ಪ್ರಧಾನಮಂತ್ರಿಿಗಳು ಮಧ್ಯಪ್ರವೇಶ ಮಾಡಬೇಕು.ಸಮತೋಲನ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ತೀರುವಳಿಗಳನ್ನು ನೀಡುವಂತೆ ಕೇಂದ್ರ ಜಲ ಆಯೋಗಕ್ಕೆೆ ನಿರ್ದೇಶಿಸಬೇಕು.
ಕಳೆದ ಒಂದು ದಶಕದಿಂದ ಕೃಷ್ಣಾಾ ಜಲ ವಿವಾದ ನ್ಯಾಾಯಮಂಡಳಿ-2ರಲ್ಲಿ ಬಾಕಿ ಇರುವ ಗೆಜೆಟ್ ಅಧಿಸೂಚನೆ ಹೊರಡಿಸಲು ಹಾಗೂ ಕೇಂದ್ರ 2023-24 ರ ಬಜೆಟ್ನಲ್ಲಿ ಘೋಷಿಸಿರುವಂತೆ ಭದ್ರಾಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಒತ್ತಾಾಯಿಸಿದ್ದಾರೆ.
ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಹುಬ್ಬಳಿ- ಧಾರವಾಡ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ಅರಣ್ಯ ಮತ್ತು ವನ್ಯಜೀವಿ ಪರಿಸರ ಇಲಾಖೆ ವತಿಯಿಂದ ನೀಡಬೇಕಾದ ತೀರುವಳಿಗಳನ್ನು ನೀಡಲು ಆಗ್ರಹಿಸಿದ್ದಾರೆ.
ಪ್ರವಾಹ ಪರಿಹಾರಕ್ಕೆೆ ಮನವಿ
ವರ್ಷ ಉಂಟಾದ ಭಾರಿ ಮಳೆಯಿಂದಾಗಿ ರಾಜ್ಯದ 14.5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 19 ಲಕ್ಷ ರೈತರಿಗೆ ನಷ್ಟ ಉಂಟಾಗಿದೆ. ಇದಲ್ಲದೇ ಸಾವಿರಾರು ಮನೆಗಳು, ರಸ್ತೆೆ ಹಾಗೂ ಶಾಲೆಗಳು ಹಾನಿಗೀಡಾಗಿದ್ದು ಎನ್.ಡಿ.ಆರ್.ಎ್ ವತಿಯಿಂದ ಪರಿಹಾರ ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಇನ್ಪುಟ್ ಸಬ್ಸಿಿಡಿಯಲ್ಲಿನ ಕೊರತೆಗಳನ್ನು ನೀಗಿಸಲು ರಕ್ಷಣೆ ಮತ್ತು ಪರಿಹಾರ’ದಡಿ 614.9 ಕೋಟಿಗಳು ಹಾಗೂ ಹಾನಿಗೊಳಗಾದ ಸಾರ್ವಜನಿಕ ಮೂಲಸೌಕರ್ಯಗಳ ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕಾಾಗಿ 1521.67 ಕೋಟಿಗಳ ಪರಿಹಾರ ನೀಡಲು ಮನವಿ ಪತ್ರದಲ್ಲಿ ಕೋರಲಾಗಿದೆ.
ಜಲ ಜೀವನ ಮಿಷನ್
ಕರ್ನಾಟಕ ರಾಜ್ಯದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ 2025-26ರ ಅಂತ್ಯದವರೆಗೆ ಕರ್ನಾಟಕಕ್ಕೆೆ ಕೊಡಬೇಕಾದ ಪಾಲಿನಲ್ಲಿ 13,004.63 ಕೋಟಿ ರೂ.ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. 2024-25ರ ಹಣಕಾಸು ವರ್ಷದಲ್ಲಿ ಹಂಚಿಕೆಯಾಗಬೇಕಿದ್ದ 3,804.41 ಕೋಟಿ ರೂ. ಪೈಕಿ ಕೇವಲ 570.66 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರವು ಸ್ವೀಕರಿಸಲಾಗಿದ್ದರೂ ರಾಜ್ಯ ಸರ್ಕಾರ ತಾನೇ ಮುಂಗಡವಾಗಿ ರೂ.7,045.64 ಕೋಟಿ ಬಿಡುಗಡೆ ಮಾಡುವ ಮೂಲಕ, ಯೋಜನೆಯ ಯಶಸ್ವಿಿಗೆ ಅಗತ್ಯ 7,602.99 ಕೋಟಿ ರೂ. ಮೊತ್ತ ಒದಗಿಸಲಾಗಿದೆ.
2025-26ನೇ ಸಾಲಿನಲ್ಲಿ ಕೇಂದ್ರದಿಂದ ಯೋಜನೆಯಡಿ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯಮುಂಗಡವಾಗಿ ರೂ.1,500 ಕೋಟಿ ಬಿಡುಗಡೆ ಮಾಡಿದೆ. ಪ್ರಸ್ತುತ 1,700 ಕೋಟಿ ರೂ. ಮೊತ್ತದ ಬಿಲ್ಗಳು ಪಾವತಿಗೆ ಬಾಕಿ ಇವೆ ಮತ್ತು 2,600 ಕೋಟಿ ರೂ. ಮೊತ್ತದ ಬಿಲ್ಲುಗಳು ಸಲ್ಲಿಕೆಯಾಗಬೇಕಿದೆ. ಗ್ರಾಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅತ್ಯಂತ ಮುಖ್ಯವಾದ ಕೇಂದ್ರದ ಯೋಜನೆಯಾಗಿದೆ. ಇದನ್ನು ಸಮಯಕ್ಕೆೆ ಸರಿಯಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಸಹಾಯ ಅನಿವಾರ್ಯ. ಆದ್ದರಿಂದ, ಜಲ ಜೀವನ ಮಿಷನ್ ಯೋಜನೆಯಡಿ ರಾಜ್ಯಕ್ಕೆೆ ಬಾಕಿ ಇರುವ ಕೇಂದ್ರದ ಪಾಲಿನ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿಿಗಳು ಒತ್ತಾಾಯಿಸಿದ್ದಾರೆ.
ಕಬ್ಬು ಬೆಳೆ ದರ ನಿಗದಿಗೆ ಸುಸ್ಥಿಿರ ಪರಿಹಾರ
ಕಬ್ಬು ಬೆಳೆಗಾರರಿಗೆ ತುರ್ತು ಆರ್ಥಿಕ ನೆರವು ನೀಡಲು ಮತ್ತು ಹೆಚ್ಚಿಿನ ನಿವ್ವಳ ದರ ಖಚಿತಪಡಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿಿ) ಪ್ರತಿ ಕೆ.ಜಿಗೆ 31 ರೂ. ರಲ್ಲಿ ಸ್ಥಗಿತಗೊಂಡಿರುವುದೇ ಸಕ್ಕರೆ ಕಾರ್ಖಾನೆಗಳು ಈ ನಿಗದಿತ ಬೆಲೆಯನ್ನು ರೈತರಿಗೆ ನೀಡಲು ಸಾಧ್ಯವಾಗದಿರುವ ಕಾರಣವನ್ನು ಪತ್ರದಲ್ಲಿ ವಿವರಿಸಿ, ಈ ಸಂಕಷ್ಟಕ್ಕೆೆ ಶಾಶ್ವತ ಮತ್ತು ಸಮರ್ಥ ಪರಿಹಾರ ಒದಗಿಸುವ ದಿಸೆಯಲ್ಲಿ, ಸಕ್ಕರೆಯ ಎಂಎಸ್ಪಿಿಯ ತಕ್ಷಣದ ಪರಿಷ್ಕರಣೆ (ಪ್ರಸ್ತುತ ಪ್ರತಿ ಕೆ.ಜಿ.ಗೆ 31 ರೂ.ಗಳು), ಕರ್ನಾಟಕದ ಸಕ್ಕರೆ ಆಧಾರಿತ ಡಿಸ್ಟಿಿಲರಿಗಳಿಂದ ಎಥನಾಲ್ ಖರೀದಿ ಮಂಜೂರಾತಿಯ ಹೆಚ್ಚಳ, ರಾಜ್ಯಗಳಿಗೆ ಕಬ್ಬಿಿನ ಬೆಲೆ ನಿಗದಿಪಡಿಸಲು ಅಥವಾ ಅನುಮೋದಿಸಲು ಅಧಿಕಾರ ನೀಡುವಂತಹ ಕೇಂದ್ರ ಅಧಿಸೂಚನೆಯ ಹೊರಡಿಸುವುದೂ ಸೇರಿದಂತೆ ಮನವಿ ಪತ್ರದಲ್ಲಿ ಮೂರು ಬೇಡಿಕೆಗಳನ್ನು ಸಲ್ಲಿಸಿದ್ದಾ

