ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ವಿಧಾನ ಪರಿಷತ್ತಿಿನಲ್ಲಿ ಮೊದಲ ದಿನ ಸೋಮವಾರ ಸದನ ಆರಂಭವಾಗುತ್ತಿಿದ್ದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಾನ ಪರಿಷತ್ತಿಿನ ಮಾಜಿ ಸದಸ್ಯರಾಗಿದ್ದ ಕೆ. ನರಹರಿ, ವಿಧಾನ ಪರಿಷತ್ತಿಿನ ಹಾಗೂ ವಿಧಾನ ಸಭೆಯ ಮಾಜಿ ಸದಸ್ಯರಾಗಿದ್ದ ಆರ್.ವಿ. ದೇವರಾಜ್, ಲೋಕಸಭಾ ಮಾಜಿ ಸದಸ್ಯರು, ಮಾಜಿ ಸಚಿವರು ಹಾಗೂ ವಿಧಾನ ಸಭೆ ಹಾಲಿ ಸದಸ್ಯರಾಗಿದ್ದ ಹುಲ್ಲಪ್ಪ ಯಮನಪ್ಪ ಮೇಟಿ, ಖ್ಯಾಾತ ಜಾನಪದ ತಜ್ಞ ಹಾಗೂ ಸಾಹಿತಿಯಾಗಿದ್ದ ಡಾ: ಎನ್.ಆರ್. ನಾಯಕ, ಖ್ಯಾಾತ ಕಾದಂಬರಿಕಾರರಾಗಿದ್ದ ಎಸ್.ಎಲ್. ಭೈರಪ್ಪ, ಹಿರಿಯ ಪತ್ರಕರ್ತರಾಗಿದ್ದ ಟಿ.ಜೆ.ಎಸ್. ಜಾರ್ಜ್, ಪ್ರಸಿದ್ಧ ಸುಗಮ ಸಂಗೀತ ಗಾಯಕಿಯಾಗಿದ್ದ ಅನುರಾಧಾ ಧಾರೇಶ್ವರ, ಪರಿಸರ ಸಂರಕ್ಷಣೆಯಲ್ಲಿಯೇ ತನ್ನ ಜೀವನ ಸವೆಸಿದ ಸಾಲುಮರದ ತಿಮ್ಮಕ್ಕ, ಮಾಜಿ ಸಂಸದರು, ಖ್ಯಾಾತ ನಟ ಹಾಗೂ ನಿರ್ಮಾಪಕರಾಗಿದ್ದ ಧರ್ಮೇಂದ್ರ ಹಾಗೂ ಹಿರಿಯ ಹಾಸ್ಯ ನಟರಾಗಿದ್ದ ಮೈಸೂರು ಶ್ರೀಕಂಠಯ್ಯ ಉಮೇಶ್ ಅವರುಗಳ ನಿಧನಕ್ಕೆೆ ವಿಷಾದ ವ್ಯಕ್ತಪಡಿಸಿ ಸಂತಾಪ ಸೂಚಿಸಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿಿ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಸಭಾ ನಾಯಕರು ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಹಾಗೂ ವಿರೋಧ ಪಕ್ಷ ದ ನಾಯಕರು ಮೃತರ ಕುರಿತು ಮಾತನಾಡಿದರು. ಮೃತರ ಗೌರವಾರ್ಥ ಒಂದು ನಿಮಿಷ ಮೌನ ಆಚರಣೆ ಮಾಡಲಾಯಿತು.
ಅಗಲಿದ ಗಣ್ಯರಿಗೆ ಪರಿಷತ್ತಿನಲ್ಲಿ ಸಂತಾಪ

