ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.20
ನಮ್ಮ ಪಕ್ಷದ ದೆಹಲಿ ವರಿಷ್ಠರು ಸಿಎಂ ಹಾಗೂ ನನಗೂ ಸೂಕ್ತ ಸಮಯದಲ್ಲಿ ಕರೆಸಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ. ಆಗ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾಾನ ನೀಡಿದ್ದಾರಾ ಎಂದು ಕೇಳಿದಾಗ ಮೇಲಿನಂತೆ ಉತ್ತರಿಸಿದರು.
ನ್ಯಾಾಷನಲ್ ಹೆರಾಲ್ಡ್ ಪ್ರಕರಣಕ್ಕೆೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎ್ಐರ್ಆ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಾಳಿಕೆ ನಡೆಯುತ್ತಿಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿಿದ್ದೇವೆ ಎಂದರು.
ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿಿ ಹೋಗುವುದಿಲ್ಲ ಎಂದರು.
ಮಂಗಳವಾರ ದೆಹಲಿಗೆ ಪ್ರಯಾಣ:
ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆೆ ಕೇಳಿದಾಗ, ನಾನು ಮಂಗಳವಾರ ದೆಹಲಿಗೆ ಹೋಗುತ್ತಿಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಿಗಳನ್ನೂ ಭೇಟಿ ಮಾಡುವೆ ಎಂದು ತಿಳಿಸಿದರು.
ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆೆ ಕೇಳಿದಾಗ, ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿಿ ಇಲಾಖೆ ನಡೆಸುತ್ತಿಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿಿದೆ ಎಂದು ತಿಳಿಸಿದರು.

