ಸುದ್ದಿಮೂಲ ವಾರ್ತೆ ಬೆಂಗಳೂರು, ನ.22:
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಾಮಿ ಅವರು ಅವಿರೋಧವಾಗಿ ಪುನರಾಯ್ಕೆೆ ಆಗಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆೆ ಬಗ್ಗೆೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.
ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ. ಈ ಹಿನ್ನೆೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆೆ ರಾಷ್ಟ್ರೀಯ ಮಂಡಳಿ ಬಂದಿತು.
ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಿಗೂ ಗಟ್ಟಿಿಯಾಗಿ ಉಳಿದಿದೆ. ಅಸಂಖ್ಯಾಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆೆ ಮೀಸಲು ಇರಿಸಿದ್ದಾರೆ. ಬೆಳ್ಳಿಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.
ನಿಖಿಲ್ ಕುಮಾರಸ್ವಾಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಿಯಾಗಿ ಮುಂದುವರಿದ್ದು, ಇದಕ್ಕೆೆ ಸಭೆಯಲ್ಲಿ ಮೆಚ್ಚುಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಿಯ ಬಗ್ಗೆೆ ಶ್ಲಾಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆೆಯೊಂದಕ್ಕೆೆ ಉತ್ತರ ನೀಡಿದರು.
ಎರಡು ಪ್ರಮುಖ ನಿರ್ಣಯ ಅಂಗೀಕಾರ:
ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ಹಾಗೂ ಪಕ್ಷ ಸಂಘಟನೆ ಮಾಡುವ ಬಗ್ಗೆೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳಿಗೆ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಸುರೇಶ್ ಬಾಬು ಅವರು ಹೇಳಿದರು.
ಯುವ ಜನತಾದಳ ರಾಜ್ಯಾಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾಾರೆಡ್ಡಿಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ, ಜೆಡಿಎಸ್ ಐಟಿ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿಿತರಿದ್ದರು.

