ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆೆ ಗುರುತಿನ ಪ್ರಶ್ನೆೆಗೆ ಉತ್ತರಿಸಿ ಅವರು ಮಾತನಾಡಿದರು.
ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿಿದ್ದಾರೆ. 155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಾಪ್ತಿಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆೆ ಹದಗೆಡದಂತೆ ಕಾಪಾಡಲು ಸ್ಪೆೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಚುಕ್ಕೆೆ ಗುರುತಿನ ಪ್ರಶ್ನೆೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಿಗಂಧೂರು ಉಪ ಪೊಲೀಸ್ ಠಾಣೆಯನ್ನು, ಪೊಲೀಸ್ ಠಾಣೆಯನ್ನಾಾಗಿ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.
600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ : ಡಾ.ಜಿ.ಪರಮೇಶ್ವರ

