ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ತಿಳಿಸಿದರು.
ಪರಿಷತ್ನಲ್ಲಿ ಪ್ರಶ್ನೋೋತ್ತರ ವೇಳೆಯಲ್ಲಿ ಹನುಮಂತ ನಿರಾಣಿ ಅವರ ಪ್ರಶ್ನೆೆಗೆ ಉತ್ತರಿಸಿದ ಅವರು, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರಕ್ಕೆೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಾಧಿಕಾರಕ್ಕೆೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಗೌರವಧನ ಭರಿಸುವುದು ಮುಂತಾದ ಎಲ್ಲಾ ವೆಚ್ಚಗಳನ್ನು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವೇ ಭರಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಿನ ಪಾರದರ್ಶಕವಾಗಿ ನಡೆಸಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯವಾಗಿದ್ದು, ಅರ್ಜಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದಲ್ಲಿ ಎಲ್ಲಾ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಸಾಧ್ಯವಾಗುತ್ತಿಿದೆ. ಅಭ್ಯರ್ಥಿಗಳಿಗೆ ಹೆಚ್ಚಿಿನ ಆರ್ಥಿಕ ಹೊರೆಯಿಲ್ಲದೆ ಪ್ರಾಾಧಿಕಾರವು ಪರೀಕ್ಷೆಯನ್ನು ನಡೆಸಲು ಕನಿಷ್ಠ ಮೊತ್ತವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳಿಂದ ನಿಗಧಿಪಡಿಸಿರುವ ಶುಲ್ಕ ಪಡೆಯುವುದು ಅನಿವಾರ್ಯವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಾಧಿಕಾರಕ್ಕೆೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವು 2022ನೇ ವರ್ಷದಿಂದ ಇಷ್ಟೇ ನಿಗದಿತ ಶುಲ್ಕ ವಿಧಿಸುತ್ತಿಿದ್ದು, ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆೆ ಹೆಚ್ಚಾಾದರೂ ಸಹ ಬಡ ಹಾಗೂ ಗ್ರಾಾಮೀಣ ಅಭ್ಯರ್ಥಿಗಳ ಹಿತದೃಷ್ಟಿಿಯಿಂದ ಶುಲ್ಕ ಹೆಚ್ಚಿಿಸಿರುವುದಿಲ್ಲ ಹಾಗೂ ಆರ್ಥಿಕ ಹೊರೆ ತಪ್ಪಿಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಅಥವಾ ಕರ್ನಾಟಕ ಲೋಕ ಆಯೋಗದ ಮಾದರಿಯಲ್ಲಿ ಅರ್ಜಿ ಶುಲ್ಕ ನಿಗದಿ ಪಡಿಸಬಹುದಲ್ಲವೇ? ಎನ್ನುವ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಸಚಿವರು, ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರಕ್ಕೆೆ ನೀಡಲಾಗುತ್ತಿಿಲ್ಲ. ಆದ್ದರಿಂದ, ಕೇಂದ್ರ ಅಥವಾ ರಾಜ್ಯ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

