ಸುದ್ದಿಮೂಲ ವಾರ್ತೆ ಮಾನ್ವಿ, ೆ.24:
ಯುವಕರು ಮತ್ತು ವಿದ್ಯಾಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ಸಿಂಧನೂರು ಡಿವೈಎಸ್ಪಿಿ ಚಂದ್ರಶೇಖರ ನಾಯಕ ಸಲಹೆ ನೀಡಿದರು.
ಇತ್ತೀಚೆಗೆ ಪಟ್ಟಣದ ಶಾರದಾ ವಿದ್ಯಾಾನಿಕೇತನ ಶಿಕ್ಷಣ ಮಹಾವಿದ್ಯಾಾಲಯದಲ್ಲಿ ನಡೆದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡುತ್ತಿಿದ್ದರು. ಇಂದಿನ ದಿನಗಳಲ್ಲಿ ಯುವ ಸಮುದಾಯ ಹೆಚ್ಚಾಾಗಿ ಮಾದಕ ವ್ಯಸನಗಳಿಗೆ, ದುಶ್ಚಟಗಳಿಗೆ ಬಲಿಯಾಗುತ್ತಿಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳಿಗೆ ಬಲಿಯಾಗುತ್ತಿಿದ್ದಾರೆ. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಳಾಗುವದಲ್ಲದೆ ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆೆ ಸಾಧ್ಯವಾಗುವುದಿಲ್ಲ. ಅದ್ದರಿಂದ ಪ್ರತಿಯೊಬ್ಬರೂ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳಿಂದ ದೂರ ಉಳಿಯುವ ಮೂಲಕ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ತರುವ ಕೆಲಸ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಾಂಶುಪಾಲ ಡಾ. ಪರಮೇಶ್ವರಪ್ಪ ಗೋಪಶೆಟ್ಟಿಿ, ಶಾರದಾ ಶಿಕ್ಷಣ ಸಂಸ್ಥೆೆಯ ಕಾರ್ಯದರ್ಶಿ ಡಾ. ಹೈಂದವಿ ಮಧುಸೂದನ್ ಗುಪ್ತಾಾ, ಸಂಸ್ಥೆೆಯ ಮುಖ್ಯಸ್ಥ ಬಿ.ಕಿಶೋರ ಕುಮಾರ್, ಉಪ ಪ್ರಾಾಂಶುಪಾಲ ವೀರಭದ್ರಯ್ಯ ಹಿರೇಮಠ ಸೇರಿದಂತೆ ಕಾಲೇಜಿನ ಉಪನ್ಯಾಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ಯುವಕರು ಮಾದಕ ವಸ್ತುಗಳಿಗೆ ಬಲಿಯಾಗದಿರಲು ಡಿವೈಎಸ್ಪಿ ಚಂದ್ರಶೇಖರ ನಾಯಕ ಸಲಹೆ

