ಸುದ್ದಿಮೂಲ ವಾರ್ತೆ ಮಸ್ಕಿ, ೆ.04:
ವಿಕಸಿತ ಭಾರತ- ಉದ್ಯೋೋಗ ಖಾತರಿ ಮತ್ತು ಜೀವನೋಪಾಯ ಮಿಷನ್-ಗ್ರಾಾಮೀಣ (ವಿಬಿ-ಜಿ ರಾಮ್ ಜಿ) ಯೋಜನೆ ಬಗ್ಗೆೆ ರಾಜ್ಯದ ಕಾಂಗ್ರೆೆಸ್ ನೇತೃತ್ವದ ಸರ್ಕಾರ ಅಪಪ್ರಚಾರ ಮಾಡುತ್ತಿಿದೆ ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಬುಧುವಾರ ಪತ್ರಿಿಕಾಗೋಷ್ಠಿಿಯಲ್ಲಿ ಆರೋಪಿಸಿದರು.
ಮಹಾತ್ಮ ಗಾಂಧೀಜಿ ಸ್ವರಾಜ್ಯದ ಕನಸು ಕಂಡಿದ್ದರು. ಪ್ರಸ್ತುತ ಸಂದರ್ಭದಲ್ಲಿ ಗಾಂಧಿ ಹೆಸರಿನ ಬದಲಿಗೆ ರಾಮ್ ಜಿ ಹೆಸರು ಸೇರಿಸಲಾಗಿದೆ ಎಂದು ಪತ್ರಿಿಕಾಗೋಷ್ಠಿಿಯಲ್ಲಿ ಗಾಂಧೀಜಿ ಹೆಸರು ಬದಲಾವಣೆಯನ್ನು ಸಮರ್ಥಿಸಿಕೊಂಡರು.
ದೇಶದಲ್ಲಿ ಮಹಾತ್ಮ ಗಾಂಧಿ ಉದ್ಯೋೋಗ ಖಾತ್ರಿಿ ಯೋಜನೆ ಆರಂಭವಾಗಿ ಎರಡು ದಶಕ ಕಳೆದಿದೆ. ಕಾಲಕ್ಕೆೆ ತಕ್ಕಂತೆ ಯೋಜನೆಯಲ್ಲಿ ಬದಲಾವಣೆ ಮಾಡುವುದು ಅಗತ್ಯವಿದ್ದು, ಆ ಕಾರಣಕ್ಕೆೆ ಬದಲಾವಣೆ ಮಾಡಲಾಗಿದೆ. ಈವರೆಗೆ ಕೇಂದ್ರ ಸರ್ಕಾರವೇ ಪೂರ್ಣ ಪ್ರಮಾಣದಲ್ಲಿ ಅನುದಾನ ನೀಡುತ್ತಿಿತ್ತು. ಇನ್ನು ಮುಂದೆ ಕೇಂದ್ರ ಶೇ 60ರಷ್ಟು ಹಣ ನೀಡಿದರೆ, ರಾಜ್ಯ ಸರ್ಕಾರ ಶೇ 40ರಷ್ಟು ಹಣ ಒದಗಿಸಿ ಯೋಜನೆ ಜಾರಿ ಮಾಡಬೇಕಿದೆ.ರಾಜ್ಯ ಸರ್ಕಾರದ ಹೊಣೆಗಾರಿಕೆ ಹೆಚ್ಚಿಿಸುವುದು, ಮತ್ತಷ್ಟು ಪಾರದರ್ಶಕ ಹಾಗೂ ಶಾಶ್ವತವಾಗಿ ಗುಣಮಟ್ಟದ ಆಸ್ತಿಿ ನಿರ್ಮಾಣದ ಗುರಿ ಹೊಂದಿದೆ ಎಂದು ಹೇಳಿದರು.
ಉದ್ಯೋೋಗ ಖಾತ್ರಿಿಯನ್ನು 100ರಿಂದ 125 ದಿನಗಳಿಗೆ ಹೆಚ್ಚಿಿಸಲಾಗಿದೆ. ಯೋಜನೆಯಲ್ಲಿ ಪಾರದರ್ಶಕತೆ ತರುವ ಸಲುವಾಗಿ ಡಿಜಿಟಲ್ ವ್ಯವಸ್ಥೆೆಗೆ ರೂಪಾಂತರಿಸಲಾಗುತ್ತಿಿದೆ. ಇದರಿಂದಾಗಿ ಯೋಜನೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ಕಾಣಬಹುದು. ಆದರೆ ರಾಜ್ಯ ಸರ್ಕಾರ ಅನಗತ್ಯವಾಗಿ ಆರೋಪ ಮಾಡುತ್ತಿಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸುರೇಶ್ ಅರಸೂರು, ಶರಣಬಸವ ಸೊಪ್ಪಿಿ ಮಠ, ಸಂತೋಷ ರಾಜಗುರು, ಬಸವಂತರಾಯ ಕುರಿ, ರಮೇಶ ಉದ್ಬಾಾಳ, ಹಾಗೂ ಬಿಜೆಪಿ ಮುಖಂಡರು ಉಪಸ್ಥಿಿತರಿದ್ದರು.
ವಿಬಿ – ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ : ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್

