ಸುದ್ದಿಮೂಲ ವಾರ್ತೆ ಹೊಸಪೇಟೆ, ಜ.14:
ಹಂಪಿ ಉತ್ಸವವನ್ನು ಈ ಬಾರಿ ೆಬ್ರವರಿ 13,14 ಮತ್ತು 15 ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧ ರಿಸಲಾಗಿದೆ ಎಂದು ಅಲ್ಪಸಂಖ್ಯಾಾತರ, ವಸತಿ. ವಕ್ಫ್ ಹಾಗೂ ಜಿಲ್ಲಾ ಉಸ್ತು ವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರ ಮುಖ ಮಾಹಿತಿಗಳನ್ನು ಹಂಚಿಕೊಂಡ ಅವರು ಉದ್ಘಾಾಟನೆ: ೆಬ್ರವರಿ 13ರ ಸಂಜೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಹಂಪಿ ಉತ್ಸವಕ್ಕೆೆ ಅಧಿಕೃತವಾಗಿ ಚಾಲ ನೆ ನೀಡಲಿದ್ದಾರೆ ಎಂದು ಹೇಳಿದರು.
ದಿನಾಂಕದ ಹಿನ್ನೆೆಲೆ: ಈ ಹಿಂದೆ ಎಂ.ಪಿ. ಪ್ರಕಾಶ್ ಅವರ ಕಾಲದಲ್ಲಿ ನವೆಂಬರ್ನಲ್ಲಿ ಉತ್ಸವ ನಡೆಯುತ್ತಿಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾ ಗಿ ಕಳೆದ ವರ್ಷಗಳಿಂದ ೆಬ್ರವರಿಯಲ್ಲಿ ನಡೆಸಲಾಗುತ್ತಿಿದೆ. ಈ ಬಾರಿಯೂ ೆಬ್ರವರಿ 13ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ.
ಮುಂದಿನ ವರ್ಷದಿಂದ ಜನವರಿಯಲ್ಲೇ ಖಾಯಂ ಹಂಪಿಉತ್ಸವ: ಮುಂದಿನ ವರ್ಷದಿಂದ ಹಂಪಿ ಉತ್ಸವವನ್ನು ಎಂ. ಪಿ. ಪ್ರಕಾಶ್ ಅವರ ಆಶಯದಂತೆ ನವೆಂಬರ್ ತಿಂಗಳಲ್ಲಿ ಪ್ರತಿ ವರ್ಷ ಖಾಯಂ ಆಗಿ ನಡೆಯುವಂತೆ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.
ಬಜೆಟ್ ಪ್ರಸ್ತಾಾವನೆ: ಉತ್ಸವದ ಯಶಸ್ವಿಿ ಆಚರಣೆಗಾಗಿ ಈ ಬಾರಿ 22 ಕೋಟಿ ಅನುದಾನ ಕೋರಿ ಸರ್ಕಾರಕ್ಕೆೆ ಪ್ರಸ್ತಾಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ 16 ಕೋಟಿ ಅನುದಾನ ನೀಡಲಾಗಿತ್ತು.
ಕಲಾವಿದರ ಆಯ್ಕೆೆ: ರಾಷ್ಟ್ರ ಮತ್ತು ರಾಜ್ಯ ಮಟ್ಟದ ಖ್ಯಾಾತ ಕಲಾವಿದರನ್ನು ಆಹ್ವಾಾನಿಸುವ ಕುರಿತು ನಾಳೆ ಗುರುವಾರ ಬೆಳಿಗ್ಗೆೆ 11 ಗಂಟೆಗೆ ಅಧಿಕಾರಿಗಳು ಹಾ ಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಿ ಅಂತಿಮಗೊಳಿಸಲಾಗುವುದು ಎಂದರು.
ಹಂಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಉತ್ಸವದಲ್ಲಿಯು ಸ್ಥಳೀಯ ಕಲಾವಿದರಿಗೂ ಹೆಚ್ಚಿಿನ ಆದ್ಯತೆ ನೀಡಲಾಗುವುದು ಮತ್ತು ಸಾರ್ವಜನಿಕರಿಗೆ ಯಾ ವುದೇ ತೊಂದರೆಯಾಗದಂತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆೆ ವಿಶೇಷ ಗಮನ ಹರಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಂಸದರಾದ ಈ.ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿಿ ಗಣೇಶ್, ನಾ.ರಾ.ಭರತ್ರೆಡ್ಡಿಿ, ಹುಡಾ ಅಧ್ಯಕ್ಷರಾದ ಹೆಚ್. ಎನ್ ಎ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಿಕೇರಿ, ಸಿಇಓ ನೋಂಗ್ಜಾಾಯ್ ಮಹ್ಮದ್ ಅಲಿ ಅಕ್ರಂ ಷಾ, ಪೊಲೀಸ್ ಅಧೀಕ್ಷಕಿ ಎಸ್. ಜಹ್ನಾಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿಿತರಿದ್ದರು.

