ಸುದ್ದಿಮೂಲ ವಾರ್ತೆ ನವದೆಹಲಿ, ನ.16:
ನಾನು ಪಕ್ಷದ ಶಿಸ್ತಿಿನ ಸಿಪಾಯಿ. ಯಾವತ್ತೂ ಕಾಂಗ್ರೆೆಸ್ ಪಕ್ಷಕ್ಕೆೆ ಬ್ಲಾಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿಿ ದುಡಿದು ಪಕ್ಷ ಕಟ್ಟಿಿದ್ದೇನೆ. ಮುಂದೆಯೂ ಕಟ್ಟುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಿಯೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾಾನಕ್ಕೆೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿಿರುವ ಬಗ್ಗೆೆ ಕೇಳಿದಾಗ, ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆೆಸ್ ಕಚೇರಿಗಳಿಗೆ ಶಂಕುಸ್ಥಾಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆೆಸ್ ಸಂಸ್ಥಾಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು. ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ ಎಂದು ತಿಳಿಸಿದರು.
ಕಾಂಗ್ರೆೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾಾನದಲ್ಲಿ ಕೆಲಸ ಮಾಡಲು ಹೇಳುತ್ತಾಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆೆ ಬರುವಂತೆ ದುಡಿಯುವವನು ನಾನು ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ಪುನಾರಚನೆ ಬಗ್ಗೆೆ ಚರ್ಚೆಯಾಗುತ್ತಿಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ಅದೆಲ್ಲಾ ಮುಖ್ಯಮಂತ್ರಿಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಾಗಿ ಶಂಕುಸ್ಥಾಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು 2.30 ಕೋಟಿ ಹಣವನ್ನು ಪಾವತಿಸುತ್ತಿಿದ್ದೇನೆ. ರಾಮಲಿಂಗಾರೆಡ್ಡಿಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದರು.

