ಸುದ್ದಿಮೂಲ ವಾರ್ತೆ ರಾಯಚೂರು, ೆ.21:
ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಇಂದು ನಗರದ ವಿವಿಧ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾಾವಿತ ಅಭಿವೃದ್ಧಿಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಮಾವಿನಕೆರೆ ಪ್ರದೇಶಕ್ಕೆೆ ಭೇಟಿ ನೀಡಿ, ಅಲ್ಲಿನ ಅಭಿವೃದ್ಧಿಿ ಕಾಮಗಾರಿ ಪರಿಶೀಲಿಸಿ ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣ ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದರು. ಉದ್ಯಾಾನವನ ಅಭಿವೃದ್ಧಿಿ ಕಾಮಗಾರಿ ನಿಗದಿತ ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.
ಬಳಿಕ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆೆ ಭೇಟಿ ನೀಡಿ ಪರಿಶೀಲನೆ ನಡೆಸಿ ತ್ವರಿತವಾಗಿ ಆರಂಭಿಸುವ ಮೂಲಕ ಸ್ಥಳೀಯ ನಿವಾಸಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಂತರ, ಸ್ವಚ್ಛತಾ ಕಾರ್ಮಿಕರಿಗಾಗಿ ಮೀಸಲಿಟ್ಟಿಿರುವ ಸ್ಮಶಾನ ಸ್ಥಳದ ಅಭಿವೃದ್ಧಿಿ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿ, ಈ ನಿಟ್ಟಿಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ಪ್ರಸ್ತಾಾಪಿಸಲಾದ ಹೊಸ ರಸ್ತೆೆಗಳ ನಿರ್ಮಾಣ ಮತ್ತು ಅಭಿವೃದ್ಧಿಿಗಾಗಿ ಸ್ಥಳ ಪರಿಶೀಲನೆ ನಡೆಸಿದರು. ಈ ಯೋಜನೆಯಡಿ ಕೈಗೊಳ್ಳಬೇಕಿರುವ ಕಾಮಗಾರಿಗಳಿಗಾಗಿ ಸಮಗ್ರ ಯೋಜನೆ ರೂಪಿಸಿ ಬೇಗನೆ ಕಾರ್ಯಾರಂಭ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಭರತ್ ಕುಮಾರ, ಕಂದಾಯ ವಿಭಾಗದ ಉಪ ಆಯುಕ್ತ ಬಿ. ಶರಣಪ್ಪ, ಕಾರ್ಯನಿರ್ವಾಹಕ ಅಭಿಯಂತರರಿದ್ದರು.
ಆಯುಕ್ತರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

