ಸುದ್ದಿಮೂಲ ವಾರ್ತೆ ಮೈಸೂರು, ಅ.02:
ನಾನು ಎರಡು ಬಾರಿ ಮುಖ್ಯಮಂತ್ರಿಿಯಾಗಿ ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊೊಳ್ಳುವ ಅವಕಾಶ ದೊರೆತಿರುವುದು ಅತ್ಯಂತ ಸಂತೋಷವನ್ನು ತಂದಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೆಳಿದರು.
ಗುರುವಾರ ನಂದಿಧ್ವಜಕ್ಕೆೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದಸರಾ ಜನರ ಹಬ್ಬ. ಹೆಚ್ಚಿಿನ ಸಂಖ್ಯೆೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಯಶಸ್ವಿಿಯಾಗುತ್ತದೆ ಎಂದರು.
ಈ ಬಾರಿಯ ದಸರಾ ಹಬ್ಬವು ಹನ್ನೊೊಂದು ದಿನಗಳ ಕಾಲ ನಡೆದಿದ್ದು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಜಂಟಿ ಸಮೀಕ್ಷೆ ನಂತರ ಬೆಳೆಪರಿಹಾರ : ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿಲ್ಲೆೆಗಳಲ್ಲಿ ಅತಿವೃಷ್ಠಿಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದೆ.
ಸರ್ಕಾರ ಮತ್ತು ಎನ್ ಡಿಆರ್ ಎ್ ಸೇರಿದಂತೆ ಖುಷ್ಕಿಿ ಜಮೀನಿನ ತಲಾ ಹೆಕ್ಟೇರ್ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ಗೂ ಪರಿಹಾರ ನೀಡಲಾಗುವುದು ಎಂದು ಅಭಯ ನೀಡಿದರು.

