ಸುದ್ದಿಮೂಲ ವಾರ್ತೆ ಬೆಂಗಳೂರು, ನ.10:
ಪಕ್ಷದಲ್ಲಿದ್ದರೂ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೊಕ್ ನೀಡಿ ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಕೃಷ್ಣಾಾರೆಡ್ಡಿಿ ಅವರನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಆದೇಶ ಹೊರಡಿಸಿದ್ದಾರೆ.
ಕೋರ್ ಕಮಿಟಿ ಸೇರಿ ವಿವಿಧ ಸಮಿತಿಗಳನ್ನು ಪುನಾರಚನೆ ಮಾಡುವುದಾಗಿ ಹೇಳಿದ್ದ ಪಕ್ಷದ ರಾಜ್ಯಾಾಧ್ಯಕ್ಷ ಎಚ್.ಡಿ. ಕುಮಾರಸ್ವಾಾಮಿ ಅವರು ಇಂದು ಸೋಮವಾರ ಸಭೆಗಳನ್ನು ನಡೆಸಿ ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾಾರೆಡ್ಡಿಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಾಗಿ ನೇಮಕ ಮಾಡಿದ್ದಾರೆ. ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಾಗಿ ನೇಮಕ ಮಾಡಲಾಗಿದೆ.
ಮಾಜಿ ಶಾಸಕ ರಾಜವೆಂಕಟಪ್ಳ ನಾಯಕ ದೊರೆ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿಿ ಮಂಜುನಾಥ್, ಶರಣಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಾಗಿ ನೇಮಕ ಮಾಡಲಾಗಿದೆ.
ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ಎಚ್ಡಿಕೆ
ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಾಮಿ ಅವರನ್ನು ನೇಮಕ ಮಾಡಿದ್ದಾರೆ.
ಈ ಸಂಚಾಲಕರನ್ನಾಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಾಗಿ ನೇಮಕ ಮಾಡಲಾಗಿದೆ.
ಸದಸ್ಯರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಾಮಿ, ಯುವ ಜನತಾದಳ ರಾಜ್ಯಾಾಧ್ಯಕ್ಷ ನಿಖಿಲ್ ಕುಮಾರಸ್ವಾಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.
ಪ್ರಚಾರ ಸಮಿತಿಗೆ ದತ್ತ ನಾಯಕತ್ವ
ಜೆಡಿಎಸ್ ಪ್ರಚಾರ ಸಮಿತಿಯನ್ನು ರಾಜ್ಯಾಾಧ್ಯಕರಾದ ಹೆಚ್.ಡಿ. ಕುಮಾರಸ್ವಾಾಮಿ ಅವರು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರನ್ನಾಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಿದ್ದಾರೆ.
ಸದಸ್ಯರಾಗಿ ಮಾಜಿ ಶಾಸಕರಾದ ಅಶ್ವಿಿನ್ ಕುಮಾರ್, ಸುರೇಶ್ ಗೌಡ, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ಡಾ. ಕೆ. ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಶಾಸಕರಾದ ಭೀಮನಗೌಡ (ರಾಜುಗೌಡ) ಪಾಟೀಲ್, ಜಿ.ಡಿ. ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಎಂ.ಆರ್. ಮಂಜುನಾಥ್, ಕೆ. ವಿವೇಕಾನಂದ, ಸಿ.ಎನ್. ಮಂಜೇಗೌಡ, ಡಾ. ಸೂರಜ್ ರೇವಣ್ಣ, ಹಿರಿಯ ನಾಯಕ ಸುಧಾಕರ್ ಎಸ್.ಶೆಟ್ಟಿಿ ಅವರು ಸದಸ್ಯರಾಗಿದ್ದಾರೆ.
ನಾಗರಾಜಯ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ
ಮಾಜಿ ಸಚಿವರಾದ ಡಿ. ನಾಗರಾಜಯ್ಯ ಅವರನ್ನು ಜೆಡಿಎಸ್ ಶಿಸ್ತುಪಾಲನಾ ಸಮಿತಿ ಅಧ್ಯಕ್ಷರನ್ನಾಾಗಿ ನೇಮಕ ಮಾಡಲಾಗಿದೆ. ಮಾಜಿ ಸಂಸದ ಕುಪೇಂದ್ರರೆಡ್ಡಿಿ, ಶಾಸಕ ಜಿ.ಕೆ. ವೆಂಕಟಾಶಿವಾರೆಡ್ಡಿಿ, ಮಾಜಿ ಶಾಸಕರಾದ ಕೆ.ಎಸ್.ಲಿಂಗೇಶ್, ಕೆ. ಮಹದೇವ, ಆರ್. ಚೌಡರೆಡ್ಡಿಿ, ಪಿ.ಆರ್ ಸುಧಾಕರ್ ಲಾಲ್, ಎಲ್.ಎನ್. ನಿಸರ್ಗ ನಾರಾಯಣಸ್ವಾಾಮಿ, ಡಾ. ಕೆ. ಶ್ರೀನಿವಾಸಮೂರ್ತಿ, ಶಾಸಕ ಹೆಚ್. ಟಿ. ಮಂಜುನಾಥ್ ಸದಸ್ಯರಾಗಿದ್ದಾರೆ.

