ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.13
ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆೆಯ ಆಯ್ಕೆೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾಾನಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆೆ ಮಾಹಿತಿ ನೀಡಿರುವ ಸಚಿವರು ಟೆಂಡರ್ಗೆ ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ. 2ನೇ ವಿಮಾನ ನಿಲ್ದಾಾಣಕ್ಕಾಾಗಿ ರಾಜ್ಯ ಸರ್ಕಾರ ಕನಕಪುರ ರಸ್ತೆೆಯಲ್ಲಿರುವ ಚೂಡಹಳ್ಳಿಿ, ಸೋಮನಹಳ್ಳಿಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಾಣ ಪ್ರಾಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆೆಯಾಗುವ ಸಲಹಾ ಸಂಸ್ಥೆೆಯು 5 ತಿಂಗಳಲ್ಲಿ ಸರಕಾರಕ್ಕೆೆ ತನ್ನ ಸಮಗ್ರ ತಾಂತ್ರಿಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ.
ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂಥ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು ಯೋಜನೆಗಳನ್ನಾಾದರೂ ನಿರ್ವಹಿಸಿರುವ ಸಲಹಾ ವರದಿ ನೀಡಿರುವಂತಹ ಸಂಸ್ಥೆೆಗಳು ಟೆಂಡರ್ನಲ್ಲಿ ಭಾಗವಹಿಸಬಹುದು. ಟೆಂಡರ್ನಲ್ಲಿ ಆಯ್ಕೆೆಯಾಗುವ ಸಂಸ್ಥೆೆಯು ನಾವು ಸೂಚಿಸುತ್ತಿಿರುವ ಮೂರೂ ಸ್ಥಳಗಳಲ್ಲಿ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಾಜ್ಯ ನಿರ್ವಹಣೆಯಂಥ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆೆ, ಅಭಿವೃದ್ಧಿಿ, ಶಬ್ದ ಮತ್ತು ವಿಮಾನ ನಿಲ್ದಾಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾಾದಿಗಳತ್ತ ಗಮನ ಹರಿಸಲಿದೆ ಎಂದು ಅವರು ಹೇಳಿದ್ದಾರೆ.
ಉದ್ದೇಶಿತ 2ನೇ ವಿಮಾನ ನಿಲ್ದಾಾಣ ಅಭಿವೃದ್ಧಿಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ. ಮತ್ತೊೊಂದು ವಿಮಾನ ನಿಲ್ದಾಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ಅವರು ನುಡಿದಿದ್ದಾರೆ.
ಉದ್ದೇಶಿತ ವಿಮಾನ ನಿಲ್ದಾಾಣಕ್ಕೆೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಿಪಡಿಸಬೇಕು ಎಂಬುದರ ಬಗ್ಗೆೆಯೂ ಸಲಹಾ ಸಂಸ್ಥೆೆ ಅಧ್ಯಯನ ನಡೆಸಲಿದೆ.
ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿಿನಲ್ಲಿ ಮೂರೂ ಸ್ಥಳಗಳ ಬಗ್ಗೆೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ ಎನ್ನುವ ಅಭಿಪ್ರಾಾಯ ಕೂಡ ಸಲಹಾ ಸಂಸ್ಥೆೆ ನೀಡಲಿದೆ ಎಂದು ಅವರು ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾಾನದಲ್ಲಿದೆ. 2033ರ ಹೊತ್ತಿಿಗೆ ನಾವು ಮತ್ತೊೊಂದು ವಿಮಾನ ನಿಲ್ದಾಾಣ ಹೊಂದಬೇಕಾಗಿದೆ. ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ನವದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ಪಾಟೀಲ ವಿವರಿಸಿದ್ದಾರೆ.

