ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.28:
ದುರಾಡಳಿತ ಮತ್ತು ವ್ಯಾಾಪಕ ಭ್ರಷ್ಟಾಾಚಾರ ಹಿನ್ನೆೆಲೆಯಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಲ್ಲಾ 25 ಗ್ರಾಾಮ ಪಂಚಾಯಿತಿಗಳ ವಿರುದ್ಧ ಇದೇ ಮೊದಲ ಬಾರಿಗೆ ಉಪ ಲೋಕಾಯುಕ್ತ ನ್ಯಾಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂ ಪ್ರೇೇರಿತ ದೂರು ದಾಖಲಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಇತಿಹಾಸದಲ್ಲಿ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು.
ಸೆಪ್ಟೆೆಂಬರ್ 30 ಮತ್ತು ಡಿಸೆಂಬರ್ 2 ರಂದು ಗ್ರಾಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನಂತರ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಈಗ ಅವರು ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇಡೀ ವ್ಯವಸ್ಥೆೆ ಪರಿಶೀಲಿಸುತ್ತಿಿದ್ದಾರೆ.
ಇದು ಕೇವಲ ಆರಂಭವಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಲು ಜಿಲ್ಲಾ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ಗಳಲ್ಲಿ ಸುಧಾರಣೆಗಳ ತರಲು, ಹೊಣೆಗಾರಿಕೆ ಮತ್ತು ಜವಾಬ್ದಾಾರಿ ಸರಿಪಡಿಸಲು ತುಮಕೂರು ಮತ್ತು ಮಂಡ್ಯದಂತಹ ಜಿಲ್ಲೆಗಳಲ್ಲಿ ಮುಂದಿನ ಕ್ರಮ ಆರಂಭಿಸಲು ಯೋಜಿಸಿದ್ದಾರೆ.
ಚರಂಡಿಗಳ ನಿರ್ವಹಣೆ, ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು, ಘನತ್ಯಾಾಜ್ಯ ನಿರ್ವಹಣೆ, ಮಾಲಿನ್ಯ ಮತ್ತು ಅತಿಕ್ರಮಣದಿಂದ ಜಲಮೂಲಗಳ ಸಂರಕ್ಷಣೆ ಮತ್ತು ಅಕ್ರಮ ಗಣಿಗಾರಿಕೆ ಮತ್ತಿಿತರ ವಿಷಯಗಳ ಕುರಿತು ನ್ಯಾಾಯಮೂರ್ತಿ ವೀರಪ್ಪ ಅವರು ಪರಿಶೀಲಿಸುತ್ತಿಿದ್ದಾರೆ.
ಪಂಚಾಯಿತಿ ಅಭಿವೃದ್ಧಿಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್ಗಳು, ಡೇಟಾ ಎಂಟ್ರಿಿ ಆಪರೇಟರ್ಗಳು, ತಾಂತ್ರಿಿಕ ಸಹಾಯಕರು, ಗ್ರಾಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಮತ್ತು ಗ್ರಾಾಮ ಪಂಚಾಯಿತಿಗಳ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಿರಿಯ ಎಂಜಿನಿಯರ್ಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಇಬ್ಬರು ಪಿಡಿಓ ಅಮಾನತು:
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೇಶ್ ಕೆ ವಿರುದ್ಧವೂ ದೂರು ದಾಖಲಾಗಿದೆ. ಇಬ್ಬರು ಗ್ರಾಾಮ ಪಂಚಾಯತ್ ಅಭಿವೃದ್ಧಿಿ ಅಧಿಕಾರಿಗಳನ್ನು (ಪಿಡಿಓ) ಅಮಾನತುಗೊಳಿಸಲಾಗಿದೆ. ಬೋರ್ವೆಲ್ ದುರಸ್ತಿಿಗಾಗಿ ಗುತ್ತಿಿಗೆದಾರರಿಗೆ 68 ಲಕ್ಷ ರೂ. ದುರ್ಬಳಕೆ ಮತ್ತು 6.69 ಲಕ್ಷ ರೂ. ಬಿಡುಗಡೆ ಮಾಡದ ಅರಿಕುಂಟೆ ಪಿಡಿಓ ಎ.ಎನ್.ಶಂಕರಪ್ಪ ಮತ್ತು ಕರ್ತವ್ಯ ಲೋಪಕ್ಕಾಾಗಿ ನಂಬಿಹಳ್ಳಿಿ ಪಿಡಿಓ ಮಂಜುನಾಥ್ ಎನ್.ಕೆ ಅವರನ್ನು ಅಮಾನತುಗೊಳಿಸಲಾಗಿದೆ.
ಮಾಡದ ಕಾಮಗಾರಿಗಳಿಗೆ ಹಣ ಬಿಡುಗಡೆ:
ದಳಸನೂರು ಗ್ರಾಾ.ಪಂ.ನಲ್ಲಿ 2019-2020ರಲ್ಲಿ ರಸ್ತೆೆ ನಿರ್ಮಾಣಕ್ಕೆೆ 3 ಲಕ್ಷ ರೂ. ವೆಚ್ಚ ಮಾಡಲಾಗಿತ್ತು. ಆದರೆ ಅದು ಅಸ್ತಿಿತ್ವದಲ್ಲಿಲ್ಲ. ಚರಂಡಿಗಳ ಹೂಳು ತೆಗೆಯಲು ಹಣ ಪಾವತಿಸಲಾಗಿದೆ. ಆದರೆ, ಯಾವುದೇ ಕೆಲಸ ಮಾಡಿಲ್ಲ ಎಂದು ದೂರುದಾರರೊಬ್ಬರು ಉಲ್ಲೇಖಿಸಿದ್ದಾರೆ. ಅಲ್ಲದೇ ಮನರೇಗಾ ಅಡಿಯಲ್ಲಿ ಮಾಡದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. 15ನೇ ಹಣಕಾಸು ಕಾರ್ಯಕ್ರಮದಡಿ ಚರಂಡಿಗಳ ಸ್ವಚ್ಛತೆ ಮತ್ತು ನೈರ್ಮಲ್ಯ ನಿರ್ವಹಣೆಗೆ ಯಾವುದೇ ಲೆಕ್ಕಪತ್ರಗಳನ್ನು ನಿರ್ವಹಿಸಿಲ್ಲ. ಆರರಲ್ಲಿ ಮೂರು ಕೆರೆಗಳು ಒತ್ತುವರಿಯಾಗಿದ್ದು, ಕಾಮಗಾರಿ ಅನುಷ್ಠಾಾನಕ್ಕೆೆ ಕೊಟೇಶನ್ ಇಲ್ಲದೇ ಬಿಲ್ ಕ್ಲಿಿಯರ್ ಮಾಡಲಾಗಿದೆ.
10,000 ರೂ.ಗಿಂತ ಹೆಚ್ಚಿಿನ ವೆಚ್ಚಕ್ಕೆೆ ಟೆಂಡರ್ ಆಹ್ವಾಾನಿಸಬೇಕು ಎಂಬ ಆದೇಶ ಇದ್ದರೂ ಪ್ರತಿ ತಿಂಗಳು ಆ ಹಣಕ್ಕೆೆ ಎರಡರಿಂದ ನಾಲ್ಕು ಬಿಲ್ಗಳನ್ನು ಮಾಡಲಾಗಿದೆ. ಎಸ್ಸಿಿ, ಎಸ್ಟಿಿ ಸಮುದಾಯಗಳಿಗೆ ಬಿಡುಗಡೆಯಾದ ಅನುದಾನ, ವಿಕಲಚೇತನರು ಮತ್ತು ಮೇಕೆ ಮತ್ತು ಗೋಶಾಲೆಗಳ ನಿರ್ಮಾಣದ ಬಗ್ಗೆೆ ಯಾವುದೇ ವಿವರಗಳನ್ನು ಒದಗಿಸಲಾಗಿಲ್ಲ.
ಉದ್ಯೋೋಗಿಗಳ ಸಂಬಳಕ್ಕಿಿಂತ ಹೆಚ್ಚಿಿನ ವಹಿವಾಟು:
ಉದ್ಯೋೋಗಿಗಳ ೆನ್ನಲ್ಲಿರುವ ಡಿಜಿಟಲ್ ಪೇಮೆಂಟ್ ಆಪ್ ಗಳನ್ನು ಪರಿಶೀಲಿಸಿದಾಗ ನಿಜವಾದ ಸಂಬಳಕ್ಕಿಿಂತ ಹೆಚ್ಚಿಿನ ವಹಿವಾಟು ನಡೆದಿರುವುದು ಕಂಡುಬಂದಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆದಿರುವ ಕಾಮಗಾರಿಯಲ್ಲಿಯೂ ಭ್ರಷ್ಟಾಾಚಾರ ನಡೆದಿದೆ. ರಸ್ತೆೆಗಳು ಮತ್ತು ಕಸ ಸಂಗ್ರಹಿಸುವ ವಾಹನಗಳ ಬಗ್ಗೆೆ ಯಾವುದೇ ಮಾಹಿತಿ ಇಲ್ಲ, ಬೋರ್ವೆಲ್ಗಳ ನಿರ್ವಹಣೆ ಕುರಿತು ಯಾವುದೇ ಮಾಹಿತಿ ನೀಡಿಲ್ಲ.
ಸರ್ವೇಶ್ ಅವರು ಕರ್ನಾಟಕ ಗ್ರಾಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆೆ, 1993 ರ ಸೆಕ್ಷನ್ 232 (ಎ) ಅನ್ನು ಉಲ್ಲಂಘಿಸಿದ್ದಾರೆ ಎಂದು ಉಪ ಲೋಕಾಯುಕ್ತರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

