ಸುದ್ದಿಮೂಲ ವಾರ್ತೆ ಮಾನ್ವಿ, ಡಿ.28:
ಮಾನ್ವಿಿ ಪಟ್ಟಣದಲ್ಲಿ ಕೈಗೊಳ್ಳಲಾಗಿರುವ ಅಮೃತ-2 ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾತ್ರಿಿ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ನೀರು ಸರಬರಾಜು ಯೋಜನೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿಿದ್ದರು.
ಮಾನ್ವಿಿ ಪಟ್ಟಣದಲ್ಲಿನ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಗಾಗಿ ಕೈಗೊಳ್ಳಲಾದ ಅಮೃತ-2 ಯೋಜನೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಹಾಗೂ ಬೇಸಿಗೆಯಲ್ಲಿ ಪಟ್ಟಣದ ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ ಪಟ್ಟಣದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ನಳಗಳನ್ನು ಜೋಡಿಸುವುದಕ್ಕೆೆ ಕ್ರಮ ಕೈಗೊಳ್ಳಬೇಕೆಂದು ಕುಡಿಯುವ ನೀರು ಸರಬರಾಜು ಮಂಡಳಿಯ ಅಧಿಕಾರಿ ಚೌಹಾಣ್ ಇವರಿಗೆ ಸೂಚನೆ ನೀಡಿದರು. ನಂತರ ವಿವಿಧ ಇಲಾಖೆಯ ಪ್ರಗತಿ ಪರಿಶೀಲಿಸಿ ಅಗತ್ಯ ಸೂಚನೆ, ಸಲಹೆ ನೀಡಿದರು.
ಸಭೆಯಲ್ಲಿ ಶಾಸಕ ಹಂಪಯ್ಯ ನಾಯಕ, ನಯೋಪ್ರಾಾ ಅಧ್ಯಕ್ಷ ಅಬ್ದುಲ್ ಗೂರ್ ಸಾಬ್,ಪಂಚ ಗ್ಯಾಾರಂಟಿ ಯೋಜನಾ ಅನುಷ್ಠಾಾನ ಸಮಿತಿ ಅಧ್ಯಕ್ಷ ಬಿ.ಕೆ. ಅಂಬರೇಶಪ್ಪ, ತಹಸೀಲ್ದಾಾರ್ ಭೀಮರಾಯ ಬಿ.ರಾಮಸಮುದ್ರ, ಪುರಸಭೆ ಮುಖ್ಯಾಾಧಿಕಾರಿ ಪರಶುರಾಮ ದೇವಮಾನೆ, ಲ್ಯಾಾಂಡ್ ಆರ್ಮಿ ಅಧಿಕಾರಿಗಳಾದ ಹನುಮಂತಪ್ಪ ಹಾಗೂ ದೇವರಾಜ, ಪುರಸಭೆಯ ನಾಮನಿರ್ದೇಶನ ಸದಸ್ಯರಾದ ಕಾಮೇಶ ಮಂದಕಲ್, ಸತ್ತಾಾರ್ಬಂಗ್ಲೆೆವಾಲೆ, ಹಂಪಯ್ಯ ನಾಯಕ ಬೆಳಗಿನಪೇಟೆ ಹಾಗೂ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಮಾನ್ವಿ: ಶೀಘ್ರವೇ ಅಮೃತ-2 ಕುಡಿಯುವ ನೀರಿನ ಯೋಜನೆ ಕಾಮಗಾರಿ ಪೂರ್ಣಗೊಳಿಸಿ-ಬೋಸರಾಜು

