ಸುದ್ದಿಮೂಲ ವಾರ್ತೆ ರಾಯಚೂರು,, ಡಿ.20
ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಅವರು ಡಿಸೆಂಬರ್ 21ರಿಂದ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 21ರ ಬೆಳಿಗ್ಗೆೆ 11 ಗಂಟೆಗೆ ರಸ್ತೆೆಯ ಮೂಲಕ ಬೆಂಗಳೂರಿನಿಂದ ನಿರ್ಗಮಿಸಿ ಸಂಜೆ 6ಗಂಟೆಗೆ ರಾಯಚೂರಿಗೆ ಆಗಮಿಸುವರು. ಡಿಸೆಂಬರ್ 22ರ ಮಧ್ಯಾಾಹ್ನ 2 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಾಲಯದ ಆವರಣದ ಕೃಷಿ ವಿಶ್ವವಿದ್ಯಾಾಲಯದ ವಿದ್ಯಾಾರ್ಥಿಗಳೊಂದಿಗೆ ಯುವನಿಧಿ ಯೋಜನೆ ಸೇರಿದಂತೆ ಗ್ಯಾಾರಂಟಿ ಯೋಜನೆಗಳು ವಿದ್ಯಾಾರ್ಥಿಗಳು ಹಾಗೂ ಸಮಾಜದಲ್ಲಿ ಬೀರಿರುವ ಸಕಾರಾತ್ಮಕ ಪರಿಣಾಮಗಳ ಕುರಿತು ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 4 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನದಲ್ಲಿ ಪ್ರಸ್ತುತದವರೆಗೆ ಸಾಧಿಸಿರುವ ಪ್ರಗತಿಯ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಗ್ಯಾಾರಂಟಿ ಸಮಿತಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗುವವರು.
ಸಂಜೆ 6 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

