ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಿಸುವ ಬಗ್ಗೆೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ತಿಿನಲ್ಲಿ ಸೋಮವಾರ ಬಿಜೆಪಿಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು.
ನಗರಾಭಿವೃದ್ಧಿಿ ಪ್ರಾಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಿಗೆ ಅವಧಿ ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು.
ಆದರೆ, ಎಸ್ರ್ಆ ದರವನ್ನು ಕಡಿಮೆ ಮಾಡುವ ಬಗ್ಗೆೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮ ಸಡಿಲಿಸಬೇಕೆಂಬ ಒತ್ತಾಾಯವಿದೆ. ಈ ಹಿನ್ನೆೆಲೆಯಲ್ಲಿ ನಿಯಮ ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಿಸುವ ಬಗ್ಗೆೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸಚಿವರು ಸದನಕ್ಕೆೆ ಭರವಸೆ ನೀಡಿದರು.
ಆದರೆ, ಯಾವುದೇ ಕಾರಣಕ್ಕೂ ನಿವೇಶನಕ್ಕೆೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆೆ ನೀಡಲಾಗುತ್ತಿಿರುವ ಮೀಸಲಾತಿ ಕಡಿಮೆ ಮಾಡುವ ಪ್ರಶ್ನೆೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ

